ಬ್ರೇಕಿಂಗ್ ನ್ಯೂಸ್
09-09-22 03:07 pm HK News Desk ಕರ್ನಾಟಕ
ರಾಯಚೂರು, ಸೆ.9 : ಶಾಲೆಯ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಕ್ಕಾಗಿ ಎರಡನೇ ತರಗತಿ ಓದುತ್ತಿದ್ದ ಬಾಲಕನಿಗೆ ಶಿಕ್ಷಕ ಬಿಸಿ ನೀರು ಎರಚಿ ವಿಕೃತಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶ್ರೀಘನ ಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ವಿದ್ಯಾರ್ಥಿ ತರಗತಿಯಲ್ಲೇ ಮಲ ವಿಸರ್ಜನೆ ಮಾಡಿದ್ದು ಬಾಲಕನ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾನೆ ಎನ್ನಲಾಗಿದೆ.

ಮಿಟ್ಟೆಕೆಲ್ಲೂರು ಗ್ರಾಮದ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್(8) ಗಾಯಾಳು ಬಾಲಕನಾಗಿದ್ದು ಹೊಟ್ಟೆ, ಬೆನ್ನಿನ ಭಾಗದಲ್ಲಿ ಚರ್ಮ ಸುಟ್ಟು ಹೋಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಸಿ ನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ. 40 ರಷ್ಟು ಸುಟ್ಟು ಹೋಗಿದೆ.
ಶಿಕ್ಷಕ ಹುಲಿಗೆಪ್ಪ ಅನ್ನೋ ವ್ಯಕ್ತಿ ಕೃತ್ಯ ಎಸಗಿದ್ದು ಘಟನೆ ಬಳಿಕ ಶಾಲೆಗೆ ಬರದೆ ಗೈರಾಗಿದ್ದಾನೆ. ಘಟನೆ ನಡೆದು ವಾರವಾದ್ರೂ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ದೂರು ದಾಖಲಿಸದಂತೆ ಪ್ರಭಾವಿಗಳು ಸೇರಿ ಬಾಲಕನ ಪೋಷಕರಿಗೆ ಒತ್ತಡ ಹಾಕಿದ್ದಾರೆ ಎನ್ನುವ ಆರೋಪಗಳಿವೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೇ ಶಿಕ್ಷಕ, ಈ ಹಿಂದೆ ಶಾಸಕರೊಬ್ಬರನ್ನ ಕೊಲ್ಲಲು ಯತ್ನಿಸಿದ್ದ ಆರೋಪಕ್ಕೂ ಒಳಗಾಗಿದ್ದ.
An incident took place in Muski taluk of Raichur where a teacher, who was angry because the boy had defecated in his school uniform, poured hot water on the 8-year-old boy and mutilated him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm