ಬ್ರೇಕಿಂಗ್ ನ್ಯೂಸ್
09-09-22 03:07 pm HK News Desk ಕರ್ನಾಟಕ
ರಾಯಚೂರು, ಸೆ.9 : ಶಾಲೆಯ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಕ್ಕಾಗಿ ಎರಡನೇ ತರಗತಿ ಓದುತ್ತಿದ್ದ ಬಾಲಕನಿಗೆ ಶಿಕ್ಷಕ ಬಿಸಿ ನೀರು ಎರಚಿ ವಿಕೃತಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶ್ರೀಘನ ಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ವಿದ್ಯಾರ್ಥಿ ತರಗತಿಯಲ್ಲೇ ಮಲ ವಿಸರ್ಜನೆ ಮಾಡಿದ್ದು ಬಾಲಕನ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾನೆ ಎನ್ನಲಾಗಿದೆ.
ಮಿಟ್ಟೆಕೆಲ್ಲೂರು ಗ್ರಾಮದ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್(8) ಗಾಯಾಳು ಬಾಲಕನಾಗಿದ್ದು ಹೊಟ್ಟೆ, ಬೆನ್ನಿನ ಭಾಗದಲ್ಲಿ ಚರ್ಮ ಸುಟ್ಟು ಹೋಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಸಿ ನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ. 40 ರಷ್ಟು ಸುಟ್ಟು ಹೋಗಿದೆ.
ಶಿಕ್ಷಕ ಹುಲಿಗೆಪ್ಪ ಅನ್ನೋ ವ್ಯಕ್ತಿ ಕೃತ್ಯ ಎಸಗಿದ್ದು ಘಟನೆ ಬಳಿಕ ಶಾಲೆಗೆ ಬರದೆ ಗೈರಾಗಿದ್ದಾನೆ. ಘಟನೆ ನಡೆದು ವಾರವಾದ್ರೂ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ದೂರು ದಾಖಲಿಸದಂತೆ ಪ್ರಭಾವಿಗಳು ಸೇರಿ ಬಾಲಕನ ಪೋಷಕರಿಗೆ ಒತ್ತಡ ಹಾಕಿದ್ದಾರೆ ಎನ್ನುವ ಆರೋಪಗಳಿವೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೇ ಶಿಕ್ಷಕ, ಈ ಹಿಂದೆ ಶಾಸಕರೊಬ್ಬರನ್ನ ಕೊಲ್ಲಲು ಯತ್ನಿಸಿದ್ದ ಆರೋಪಕ್ಕೂ ಒಳಗಾಗಿದ್ದ.
An incident took place in Muski taluk of Raichur where a teacher, who was angry because the boy had defecated in his school uniform, poured hot water on the 8-year-old boy and mutilated him.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm