ಬ್ರೇಕಿಂಗ್ ನ್ಯೂಸ್
09-09-22 04:17 pm HK News Desk ಕರ್ನಾಟಕ
ತುಮಕೂರು, ಸೆ.9: 2014-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಲಾಗಿದೆ ಎನ್ನುವ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಜಿಲ್ಲೆ ತುಮಕೂರಿನಲ್ಲೇ 10 ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ನೇಮಕಾತಿ ಆರೋಪದಡಿ 10 ಶಿಕ್ಷಕರನ್ನ ವಶಕ್ಕೆ ಪಡೆದಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ಕಮ್ಲಾಪುರದ ಶಾಲೆಯ ಶಿಕ್ಷಕ ಹಾಗೂ ಕುಣಿಗಲ್ ತಾಲ್ಲೂಕಿನ ಕೊಡವತ್ತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ನಾಗಸಂದ್ರ ಪ್ರೌಢ ಶಾಲೆಯ ಶಿಕ್ಷಕಿ, ಅಮೃತೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ, ಹೊಳಗೇರಿಪುರ ಶಾಲೆಯ ಶಿಕ್ಷಕ ಹಾಗೂ ತಿಪಟೂರು ತಾಲೂಕಿನ ಅಲ್ಬೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ, ತುರುವೇಕೆರೆ ತಾಲೂಕಿನ ಹುಲಿಕಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಹುಲಿಕೆರೆ ಶಾಲೆಯ ಶಿಕ್ಷಕ ಹಾಗೂ ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ ಶಾಲೆಯ ಶಿಕ್ಷಕ ಸೇರಿದಂತೆ 10 ಶಾಲೆಗಳಿಂದ ತಲಾ ಓರ್ವ ಶಿಕ್ಷಕರನ್ನ ಸಿಐಡಿ ವಶಕ್ಕೆ ಪಡೆದಿದೆ. ಅವರನ್ನು ಬೆಂಗಳೂರಿನ ಸಿಐಡಿ ಕಛೇರಿಗೆ ಕರೆದೊಯ್ದಿರುವ ಸಿಐಡಿ ಅಧಿಕಾರಿಗಳು ಅಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
2014-15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಆಗಿದೆಯೆಂದು ಆರೋಪಿಸಿ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೆಲವು ದಿನಗಳ ಹಿಂದೆ ರಾಜ್ಯ ಸರಕಾರ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ 10 ಶಿಕ್ಷಕರನ್ನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಅವಧಿಯಲ್ಲಿ ಆಗಿದ್ದ ಪ್ರಕರಣಗಳನ್ನು ರೀ ಓಪನ್ ಮಾಡಲಾಗುವುದು ಎಂದಿದ್ದರು.
The Karnataka Police’s criminal investigation department (CID) arrested 10 education officials of the school education and literacy department Tuesday in connection with the alleged irregularities in teacher recruitment process in 2012-13 and 2014-15. The irregularities were part of recruiting grade-2 assistant teachers for government high schools in Karnataka.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm