ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm