ಬ್ರೇಕಿಂಗ್ ನ್ಯೂಸ್
11-09-22 08:36 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಸೆಪ್ಟೆಂಬರ್ ಹತ್ತರಂದು ಪ್ರತಿ ವರ್ಷ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರಕಾರದ ವತಿಯಿಂದ ನಾರಾಯಣ ಗುರುಗಳ ಜಯಂತಿ ಆಚರಣೆ ಮಾಡಿಕೊಂಡು ಬರಲಾಗಿತ್ತು. ಆದರೆ ಈ ಬಾರಿ ಆಚರಣೆ ಮಾಡಿಲ್ಲ. ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿಯೂ ಕಾರ್ಯಕ್ರಮ ನಡೆಸಿಲ್ಲ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರಕಾರದ ಈ ಧೋರಣೆಯಿಂದ ಈಡಿಗ, ಬಿಲ್ಲವ, ನಾಮಧಾರಿ ಸಮಾಜಕ್ಕೆ ಅಪಮಾನವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರು ಜಯಂತಿ ಘೋಷಣೆ ಮಾಡಿದ್ದರು. ಅವರಿದ್ದಾಗ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಚರಣೆ ಮಾಡುತ್ತ ಬರಲಾಗಿತ್ತು. ಆದರೆ, ಈಗಿನ ಸರಕಾರವು ರಾಜ್ಯ ಮಟ್ಟದ ಆಚರಣೆಯನ್ನು ನಡೆಸದೆ ಅವಮಾನ ಮಾಡಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಬೆಂಗಳೂರಿನ ಬದಲು ಮಂಗಳೂರಿನಲ್ಲಿ ನಡೆಸಲಾಗಿದೆ. ನಮ್ಮ ಸಮಾಜದ ಸಚಿವರಿಗೆ ಈ ಕಾರ್ಯಕ್ರಮದ ಮಾಹಿತಿ ನೀಡಿಲ್ಲ. ಸರಕಾರವು ಜಯಂತಿ ದಿನದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿ ಮಾತು ತಪ್ಪಿದೆ. ಇದನ್ನು ನಮ್ಮ ಸಮಾಜ ಖಂಡನೆ ಮಾಡುತ್ತದೆ ಎಂದು ನಾರಾಯಣ ಗುರು ಶಕ್ತಿಪೀಠದ ಪ್ರಣಾವಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಬಾರಿ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಕಾರ್ಯಕ್ರಮ ನಡೆಸುವುದಕ್ಕೂ ಮುನ್ನ ಸಮಾಜದ ಗಣ್ಯರನ್ನು, ಸಮಾಜದ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.
Sri Narayana Guru Jayanti not held in Banquet hall Pranavanada swami angry
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm