ಬ್ರೇಕಿಂಗ್ ನ್ಯೂಸ್
11-09-22 10:45 pm HK News Desk ಕರ್ನಾಟಕ
ಬೆಂಗಳೂರು, ಸೆ.11: ಅರಣ್ಯ ರಕ್ಷಣೆಯಲ್ಲಿ ತೊಡಗಿಕೊಂಡವರು ಕರ್ತವ್ಯ ಸಂದರ್ಭ ಮೃತಪಟ್ಟರೆ ಕುಟುಂಬಸ್ಥರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು 30ರಿಂದ 50 ಲಕ್ಷಕ್ಕೆ ಏರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹುತಾತ್ಮರ ಸಲುವಾಗಿ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 20ರಿಂದ 30 ಲಕ್ಷಕ್ಕೆ ಏರಿಸಿದ್ದರು. ನಮ್ಮ ಸರಕಾರ ಅದನ್ನು ಏರಿಸುತ್ತಿದ್ದು, 50 ಲಕ್ಷಕ್ಕೆ ಏರಿಸುವ ನಿರ್ಧಾರ ಕೈಗೊಂಡಿದ್ದೇವೆ. ಅಲ್ಲದೆ, ಕುಟುಂಬದ ಒಬ್ಬರಿಗೆ ಇಲಾಖೆಯಲ್ಲಿ ಉದ್ಯೋಗವನ್ನೂ ಕೊಡಿಸಲಾಗುವುದು. ನೀವು ಅರಣ್ಯವನ್ನು ಸಂರಕ್ಷಿಸುತ್ತೀರಿ. ನಿಮ್ಮನ್ನು ಸರಕಾರ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ ಬರಡು ಭೂಮಿಯಿದೆ. ಖಾಲಿ ಗುಡ್ಡ ಪ್ರದೇಶಗಳಿವೆ. ಅರಣ್ಯ ಹೊರತುಪಡಿಸಿ ಸರಕಾರಿ ಜಾಗದಲ್ಲೂ ಅರಣ್ಯ ಬೆಳೆಸಲು ಅಧಿಕಾರಿಗಳು ಮುಂದಾಗಬೇಕು. ಅರಣ್ಯ ಇಲಾಖೆಯವರು ಮನಸ್ಸು ಮಾಡಿದರೆ, ಬೋಳು ಗುಡ್ಡದಲ್ಲಿ ಅರಣ್ಯ ಬೆಳೆಸುವುದು ಕಷ್ಟದ ಮಾತಲ್ಲ. ಜಮ್ಶೆಡ್ ಪುರದಲ್ಲಿ ಟಾಟಾ ಕಂಪನಿ ನಡೆಸುತ್ತಿದ್ದ ಕಬ್ಬಿಣ ಅದಿರು ಗಣಿಗಳಲ್ಲಿ ಅರಣ್ಯ ಬೆಳೆಸಲಾಗಿದೆ ಅಂದ್ರೆ, ಖಾಲಿ ಗುಡ್ಡದಲ್ಲಿ ನಮಗೆ ಸಸ್ಯ ಬೆಳೆಸಲಾಗದೇ, ವಿಲ್ ಪವರ್ ಇದ್ದಲ್ಲಿ ಯಾವುದನ್ನೂ ಸಾಧನೆ ಮಾಡಬಹುದು. ಅರಣ್ಯ ಹೆಚ್ಚಿಸಿದರೆ, ನಾವು ಮುಂದಿನ ಜನಾಂಗಕ್ಕೆ ಕೊಡುವ ಅತಿ ದೊಡ್ಡ ಗಿಫ್ಟ್ ಅದಾಗುತ್ತದೆ ಎಂದು ಹೇಳಿದರು.
ಒಂದು ಭಾಗದಲ್ಲಿ ಅರಣ್ಯ ಕಡಿದು ಪರಿಸರಕ್ಕೆ ಹಾನಿಯಾದಲ್ಲಿ ಅದೇ ವರ್ಷದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸುವ ಕಾರ್ಯ ಆಗಬೇಕು. ಇದಕ್ಕಾಗಿ ನಮ್ಮ ಸರಕಾರ ಮೊದಲ ಬಾರಿಗೆ ಪರಿಸರ ಕೇಂದ್ರಿತ ಬಜೆಟ್ ಘೋಷಣೆ ಮಾಡಿತ್ತು. ಅರಣ್ಯ ಬೆಳೆಸುವುದಕ್ಕಾಗಿಯೇ ಬಜೆಟ್ ನಲ್ಲಿ 100 ಕೋಟಿ ಮೀಸಲಿಟ್ಟಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.
The solatium amount granted to members of the deceased families of Forest Department Martyrs will be increased from the present Rs 30 lakh to Rs 50 lakh, Chief Minister Basavaraj Bommai announced in Bengaluru on Sunday.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm