ಬ್ರೇಕಿಂಗ್ ನ್ಯೂಸ್
12-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಬೆಂಗಳೂರಿನಲ್ಲಿ ಮಳೆಯಿಂದಾಗಿ ರಾಡಿ ಎದ್ದ ಬೆನ್ನಲ್ಲೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯೊಬ್ಬಳು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬಾಣಸವಾಡಿ ಬಳಿ ನಡೆದಿದೆ. ಎಚ್ಬಿಆರ್ ಲೇಔಟ್ ನಿವಾಸಿಯಾಗಿದ್ದ ನೇಪಾಳ ಮೂಲದ ತಾರಾ ಬಡಾಯಿಕ್(23) ಮೃತ ಯುವತಿ.
ಘಟನೆ ಸಂದರ್ಭದಲ್ಲಿ ಹಿಂಬದಿ ಸವಾರನಾಗಿದ್ದ ದಿಲೀಪ್(38) ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸಾರಾಯಿಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ, ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆ ಸೇರಿಸಲಾಗಿತ್ತು.
ನೇಪಾಳ ಮೂಲದ ತಾರಾ ಬಡಾಯಿಕ್ ಕೆಲವು ವರ್ಷಗಳಿಂದ ಬೆಂಗಳೂರಿನ ಎಚ್ಬಿಆರ್ ಲೇಔಟ್ ನಲ್ಲಿ ನೆಲೆಸಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದಳು. ಶನಿವಾರ ರಾತ್ರಿ ತನ್ನ ಡಿಯೋ ಸ್ಕೂಟರಿನಲ್ಲಿ ಸ್ನೇಹಿತ ದಿಲೀಪ್ ನನ್ನು ಹಿಂಬದಿ ಕೂರಿಸಿಕೊಂಡು ಎಚ್ಬಿಆರ್ ಲೇಔಟ್ ಮುಖ್ಯರಸ್ತೆಯಲ್ಲಿ ಸಾರಾಯಿ ಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ಹೊರಟ್ಟಿದ್ದಳು. ಮಾರ್ಗ ಮಧ್ಯೆ ಖಾಸಾ ಗ್ರ್ಯಾಂಡ್ ಬರಾಲಾ ಆಪಾರ್ಚ್ಮೆಂಟ್ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ತಾರಾ ಬಡಾಯಿಕ್ ತಲೆ ಹಾಗೂ ತೊಡೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತಾರಾ ಬಡಾಯಿಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ತನಿಖೆ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident occurred around 12:30 am when the victim and her friend were on the way to HBR Layout.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm