ಬ್ರೇಕಿಂಗ್ ನ್ಯೂಸ್
12-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಬೆಂಗಳೂರಿನಲ್ಲಿ ಮಳೆಯಿಂದಾಗಿ ರಾಡಿ ಎದ್ದ ಬೆನ್ನಲ್ಲೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯೊಬ್ಬಳು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬಾಣಸವಾಡಿ ಬಳಿ ನಡೆದಿದೆ. ಎಚ್ಬಿಆರ್ ಲೇಔಟ್ ನಿವಾಸಿಯಾಗಿದ್ದ ನೇಪಾಳ ಮೂಲದ ತಾರಾ ಬಡಾಯಿಕ್(23) ಮೃತ ಯುವತಿ.
ಘಟನೆ ಸಂದರ್ಭದಲ್ಲಿ ಹಿಂಬದಿ ಸವಾರನಾಗಿದ್ದ ದಿಲೀಪ್(38) ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸಾರಾಯಿಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ, ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆ ಸೇರಿಸಲಾಗಿತ್ತು.
ನೇಪಾಳ ಮೂಲದ ತಾರಾ ಬಡಾಯಿಕ್ ಕೆಲವು ವರ್ಷಗಳಿಂದ ಬೆಂಗಳೂರಿನ ಎಚ್ಬಿಆರ್ ಲೇಔಟ್ ನಲ್ಲಿ ನೆಲೆಸಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದಳು. ಶನಿವಾರ ರಾತ್ರಿ ತನ್ನ ಡಿಯೋ ಸ್ಕೂಟರಿನಲ್ಲಿ ಸ್ನೇಹಿತ ದಿಲೀಪ್ ನನ್ನು ಹಿಂಬದಿ ಕೂರಿಸಿಕೊಂಡು ಎಚ್ಬಿಆರ್ ಲೇಔಟ್ ಮುಖ್ಯರಸ್ತೆಯಲ್ಲಿ ಸಾರಾಯಿ ಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ಹೊರಟ್ಟಿದ್ದಳು. ಮಾರ್ಗ ಮಧ್ಯೆ ಖಾಸಾ ಗ್ರ್ಯಾಂಡ್ ಬರಾಲಾ ಆಪಾರ್ಚ್ಮೆಂಟ್ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ತಾರಾ ಬಡಾಯಿಕ್ ತಲೆ ಹಾಗೂ ತೊಡೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತಾರಾ ಬಡಾಯಿಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ತನಿಖೆ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident occurred around 12:30 am when the victim and her friend were on the way to HBR Layout.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm