ಬ್ರೇಕಿಂಗ್ ನ್ಯೂಸ್
12-09-22 12:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಬೆಂಗಳೂರಿನಲ್ಲಿ ಮಳೆಯಿಂದಾಗಿ ರಾಡಿ ಎದ್ದ ಬೆನ್ನಲ್ಲೇ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಯೊಬ್ಬಳು ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಬಾಣಸವಾಡಿ ಬಳಿ ನಡೆದಿದೆ. ಎಚ್ಬಿಆರ್ ಲೇಔಟ್ ನಿವಾಸಿಯಾಗಿದ್ದ ನೇಪಾಳ ಮೂಲದ ತಾರಾ ಬಡಾಯಿಕ್(23) ಮೃತ ಯುವತಿ.
ಘಟನೆ ಸಂದರ್ಭದಲ್ಲಿ ಹಿಂಬದಿ ಸವಾರನಾಗಿದ್ದ ದಿಲೀಪ್(38) ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶನಿವಾರ ತಡರಾತ್ರಿ 12.30ರ ಸುಮಾರಿಗೆ ಸಾರಾಯಿಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ತೆರಳುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆ ಬದಿ ಇದ್ದ ಚರಂಡಿಗೆ ಬಿದ್ದಿದ್ದಾಳೆ. ಈ ವೇಳೆ, ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆ ಸೇರಿಸಲಾಗಿತ್ತು.
ನೇಪಾಳ ಮೂಲದ ತಾರಾ ಬಡಾಯಿಕ್ ಕೆಲವು ವರ್ಷಗಳಿಂದ ಬೆಂಗಳೂರಿನ ಎಚ್ಬಿಆರ್ ಲೇಔಟ್ ನಲ್ಲಿ ನೆಲೆಸಿದ್ದು, ಅಡುಗೆ ವೃತ್ತಿ ಮಾಡಿಕೊಂಡಿದ್ದಳು. ಶನಿವಾರ ರಾತ್ರಿ ತನ್ನ ಡಿಯೋ ಸ್ಕೂಟರಿನಲ್ಲಿ ಸ್ನೇಹಿತ ದಿಲೀಪ್ ನನ್ನು ಹಿಂಬದಿ ಕೂರಿಸಿಕೊಂಡು ಎಚ್ಬಿಆರ್ ಲೇಔಟ್ ಮುಖ್ಯರಸ್ತೆಯಲ್ಲಿ ಸಾರಾಯಿ ಪಾಳ್ಯ ಕಡೆಯಿಂದ ಹೆಣ್ಣೂರು ಕಡೆಗೆ ಹೊರಟ್ಟಿದ್ದಳು. ಮಾರ್ಗ ಮಧ್ಯೆ ಖಾಸಾ ಗ್ರ್ಯಾಂಡ್ ಬರಾಲಾ ಆಪಾರ್ಚ್ಮೆಂಟ್ ಬಳಿ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದೆ. ಈ ವೇಳೆ ತಾರಾ ಬಡಾಯಿಕ್ ತಲೆ ಹಾಗೂ ತೊಡೆಗೆ ಗಂಭೀರ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ತಾರಾ ಬಡಾಯಿಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ತನಿಖೆ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The incident occurred around 12:30 am when the victim and her friend were on the way to HBR Layout.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm