ಬ್ರೇಕಿಂಗ್ ನ್ಯೂಸ್
13-09-22 03:44 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಬೆಂಗಳೂರಿನ ಇಬ್ಬರು ಯುವಕರು ಶಿಕ್ಷಣ ಮತ್ತು ಪರಿಸರದ ಕುರಿತ ಜಾಗೃತಿಗಾಗಿ 20 ರಾಜ್ಯಗಳನ್ನು ಸುತ್ತಿ 24,000 ಕಿಮೀ ಸೈಕಲ್ ಜಾಥಾ ನಡೆಸಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ.
ಬೆಂಗಳೂರಿನ ಧನುಷ್ ಮಂಜುನಾಥ್ ಮತ್ತು ಹೇಮಂತ್ ಈ ಸಾಧನೆ ಮಾಡಿದ ಯುವಕರು. ಏನಾದರು ಸಾಧನೆ ಮಾಡಬೇಕು, ಸಮಾಜಕ್ಕೆ ಸಂದೇಶ ನೀಡಬೇಕು ಎನ್ನುವ ಉದ್ದೇಶದಿಂದ ಮೊದಲಿಗೆ 15,000 ಕಿಮೀ ಸೈಕಲ್ ಜಾಥಾ ಮಾಡಲು ಯೋಜನೆ ಹಾಕಿದ್ದರು. ಇದೇ ವೇಳೆ, 19,400 ಕಿಮೀ ಸೈಕಲ್ ಜಾಥಾ ನಡೆಸಿದರೆ, ಗಿನ್ನೆಸ್ ರೆಕಾರ್ಡ್ ಮಾಡುವ ಬಗ್ಗೆ ಮಾಹಿತಿ ತಿಳಿದ ಯುವಕರು ಹೊಸ ದಾಖಲೆಗೆ ಮುಂದಾಗಿದ್ದರು.

ಜುಲೈ 11, 2021 ರಂದು ಬೆಂಗಳೂರಿನಿಂದ ಶಿಕ್ಷಣ ಮತ್ತು ಪರಿಸರ ಜಾಗೃತಿ ಹೆಸರಲ್ಲಿ ಆರಂಭಿಸಿದ್ದ ಸೈಕಲ್ ಜಾಥಾ ಆಂಧ್ರಪ್ರದೇಶ, ತೆಲಂಗಾಣ , ಗುಜರಾತ್, ಮಧ್ಯಪ್ರದೇಶ , ಉತ್ತರಾಖಂಡ್, ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಹರಿಯಾಣ, ಒರಿಸ್ಸಾ, ಜಾರ್ಖಂಡ್, ರಾಜಸ್ಥಾನ, ಮಣಿಪುರ, ನಾಗಲ್ಯಾಂಡ್, ದೆಹಲಿ, ಪಂಜಾಬ್, ಮಹಾರಾಷ್ಟ್ರ, ಗೋವಾ, ತಮಿಳುನಾಡು ರಾಜ್ಯ ಗಳಿಗೆ ಭೇಟಿ ನೀಡಿ ಮಾರ್ಚ್ 12, 2022 ಕ್ಕೆ ಸುದೀರ್ಘ 8 ತಿಂಗಳ 2400 ಕಿ.ಮೀ ಪ್ರಯಾಣ ಮುಗಿಸಿದ್ದಾರೆ.
ಜಾಥಾ ಸಂದರ್ಭದಲ್ಲಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ. ಉತ್ತರಾಖಂಡ್, ಮಧ್ಯಪ್ರದೇಶ, ಗುಜರಾತ್ , ಗೋವಾದ ಮುಖ್ಯಮಂತ್ರಿಗಳು ಹಾಗು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಜಾಥಾದಲ್ಲಿ ಭೇಟಿ ನೀಡಿದ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧನುಷ್, ನಾವು ಪ್ರತಿದಿನ ಬೆಳಗ್ಗೆ 6.30ರಿಂದ ಸಂಜೆ 6.30ರ ತನಕ ಸೈಕ್ಲಿಂಗ್ ಮಾಡುತ್ತಿದ್ದೆವು. ಒಂದು ದಿನಕ್ಕೆ 100-120 ಕಿಮೀ ದೂರ ಕ್ರಮಿಸುತ್ತಿದ್ದೆವು. ನಾವು ಹೋದಲೆಲ್ಲಾ ರೋಟರಿ ಕ್ಲಬ್ ನಮಗೆ ತುಂಬಾ ಸಹಕಾರ ನೀಡಿದೆ. ಸಾಮಾನ್ಯ ಜನರು 2ರಿಂದ 5 ಕಿಮೀ ವ್ಯಾಪ್ತಿಗೆ ಸೈಕಲ್ ಬಳಸಿದರೆ ಒಂದಷ್ಟು ಮಾಲಿನ್ಯ ತಪ್ಪಿಸಬಹುದು ಎಂದಿದ್ದಾರೆ.
ಪ್ರತಿ ದಿನದ ಜಾಥಾಕ್ಕೆ ದಾಖಲೆ ಪತ್ರ
ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಒಪ್ಪಿಗೆ ದೊರೆತ ನಂತರ ಜಾಥಾ ಆರಂಭಿಸಿದ್ದರು. ಪ್ರತಿ ದಿನ ಜಾಥಾ ಸಂದರ್ಭದಲ್ಲಿ ನಾಲ್ಕು ಜನರ ದಾಖಲೆ ಪತ್ರ, ಇಬ್ಬರು ಸರಕಾರಿ ಉದ್ಯೋಗಿಗಳ ಸಾಕ್ಷಿ ಹಾಗೂ ಪ್ರತಿ ಗಂಟೆಗೆ ವಿಡಿಯೋ ಮಾಡಬೇಕು ಎಂಬ ಸವಾಲು ಇತ್ತು. ಹಾಗಾಗಿ ತಮ್ಮ ಜಾಥಾಕ್ಕೆ ಜನರನ್ನೇ ಸಾಕ್ಷಿ ಮಾಡಬೇಕಾಗಿತ್ತು.
Bangalore 24 thousand km cycle raid, 20 states travelled in eight months by two youths, Guinness World record
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm