ಬ್ರೇಕಿಂಗ್ ನ್ಯೂಸ್
14-09-22 11:21 am HK News Desk ಕರ್ನಾಟಕ
ಹಾಸನ, ಸೆ.14 : ಒಂದು ರಾಷ್ಟ್ರೀಯ ಪಕ್ಷವಾಗಿ ಬಿಜೆಪಿಯವರು ಜನಸ್ಪಂದನ ಕಾರ್ಯಕ್ರಮದ ವೇದಿಕೆಯಲ್ಲಿ ಬಳಸಿರುವ ಪದಗಳು ಅವರ ಸಂಸ್ಕೃತಿ ಹೇಳುತ್ತದೆ. ಮುಖ್ಯಮಂತ್ರಿ, ವಿರೋಧ ಪಕ್ಷಗಳಿಗೆ ಧಮ್ ಇದ್ರೆ, ತಾಕತ್ತಿದ್ರೆ ಎಂದು ಪದ ಬಳಸಿದ್ದಾರೆ. ಇದು ಕುಸ್ತಿಯ ಮಲ್ಲ ಯುದ್ಧವಲ್ಲ. ಇದು ರಾಜಕೀಯ, ರಾಜ್ಯದ ಜನರ ಕೆಲಸ ಆಗಬೇಕು. ಇಲ್ಲಿ ಯಾವುದರ ಬಗ್ಗೆ ಧಮ್, ತಾಕತ್ತು ತೋರಿಸಬೇಕು. ಜನರ ಕೆಲಸದಲ್ಲಿ ಧಮ್ ತೋರಿಸಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜನಸ್ಪಂದನ ಮಾಡಿ, ವಿಕೃತವಾದ ರೀತಿ ನಡೆಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಗಳು ನೃತ್ಯ ಮಾಡುತ್ತಿದ್ದಾರೆ. ಒಂದು ಕಡೆ ಜನ ಬೀದಿಯಲ್ಲಿದ್ದಾರೆ, ಬೆಳೆ ಕಳೆದುಕೊಂಡು ರೈತರು ಚಿಂತೆಯಲ್ಲಿದ್ದಾರೆ. ವಿರೋಧ ಪಕ್ಷದ ನಾಯಕರೂ ಮಾತನಾಡುವುದನ್ನು ಗಮನಿಸಿದ್ದೇನೆ. ನನ್ನ ಬಗ್ಗೆಯೂ ಯಾರೋ ಒಬ್ಬ ಮಂತ್ರಿ, ಪಲಾಯನ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ಸದನದಲ್ಲಿ ನೋಡೋಣ, ಫಲಾಯನ ಮಾಡುತ್ತೇನೋ ಏನು ಅಂತ. ಈ ಸದನದಲ್ಲಿ ಒಂದು ದಾಖಲೆ ಇಡುತ್ತೇನೆ. ನಂತರ ನೋಡೋಣ ಗಾಳಿಯಲ್ಲಿ ಗುಂಡು ಹಾರಿಸುತ್ತಾನೋ ಬುಲೆಟ್ ಇಡುತ್ತಾನೋ ಎಂದು. ಒಬ್ಬ ಮಂತ್ರಿ ಇಲಾಖೆಗೆ ಸಂಬಂಧಪಟ್ಟ ಫೈಲನ್ನ ಮಂತ್ರಿ ಮನೆಯಲ್ಲಿ ಇಟ್ಟುಕೊಂಡಿರೋದು ಗೊತ್ತು. 2008 ರಲ್ಲಿ ಕುಪ್ಪಳ್ಳಿಯಲ್ಲಿ ಅಪ್ಪ ಮಕ್ಕಳನ್ನ ಮುಗಿಸೋದೆ ನಮ್ಮ ಗುರಿ ಎಂದಿದ್ದರು. ನಂತರ ದಾಖಲೆ ಸಮೇತ ಜನತೆ ಮುಂದೆ ಇಟ್ಟೆವು. ಸರ್ಕಾರದ ನಿಜವಾದ ಲೋಪಗಳಿದ್ದರೂ ತನಿಖೆ ಆಗಲೇ ಇಲ್ಲ. ವಿಧಾನಸಭೆಯಲ್ಲಿ ಈ ಎಲ್ಲ ವಿಚಾರವಾಗಿ ಚರ್ಚೆ ಮಾಡುತ್ತೇನೆ ಎಂದರು.

ತೆಲಂಗಾಣ ಸಿಎಂ ಕೆಸಿಆರ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ರಾಷ್ಟ್ರ ರಾಜಕೀಯಕ್ಕೆ ಹೋಗುವ ಅನಿವಾರ್ಯ ಇಲ್ಲ. ನಮ್ಮ ಕುಟುಂಬಕ್ಕೆ ಅದರ ಅನುಭವ ಇದೆ. ಸಮಾನ ಮನಸ್ಕರು ದೇಶದ ಹಿತ ದೃಷ್ಟಿಯಿಂದ ಒಗ್ಗೂಡಿದ್ದೇವೆ. ಮೊದಲು ನಮ್ಮ ಸಾಗುವಳಿ ಭೂಮಿಯಲ್ಲಿ ಉಳುಮೆ ಮಾಡಬೇಕು. ಅದನ್ನು ಬಿಟ್ಟು ಬಗರ್ ಹುಕುಂ ಜಾಗ ಹುಡುಕಲು ಯಾಕೆ ಹೋಗಬೇಕು. ನಾನು ಮೊದಲು ಕರ್ನಾಟಕವನ್ನ ಸರಿ ಮಾಡಿಕೊಳ್ಳಬೇಕು. ಜೊತೆಗೆ ದೇಶದ ಬಗ್ಗೆಯೂ ಗಮನ ಹರಿಸುತ್ತೇವೆ ಎಂದರು ಹೆಚ್ಡಿಕೆ.
ರಾಜ್ಯದಲ್ಲಿ ಸುಮಾರು 120 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಸೂಚಿಸಿದ್ದೇನೆ. ಅದರಲ್ಲಿ ಇನ್ನೂ 20-30 ಕ್ಷೇತ್ರಗಳಲ್ಲಿ ಗೊಂದಲ ಇದೆ. ನಾವು ನೀಡಿದ ಟಾಸ್ಕ್ ಇನ್ನೂ ಕಂಪ್ಲೀಟ್ ಆಗಿಲ್ಲ. ಇನ್ನೆರೆಡು ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನಾನು ಕೂಡ ಸರ್ವೆ ಮಾಡಿಸುತ್ತಿದ್ದು ಶೀಘ್ರ ನಿರ್ಧಾರ ಕೈಗೊಳ್ಳುತ್ತೇವೆ. ಇಂದಿನ ಸಭೆಯಿಂದ ನಿಮಗೂ ಹಾಸನ ಟಿಕೆಟ್ ಬಗ್ಗೆ ಗ್ರಹಿಕೆ ಆಗಿರಬಹುದು. ಕೇವಲ ನಮ್ಮ ಕುಟುಂಬ ಮಾತ್ರವಲ್ಲ ಪಕ್ಷದ ಕಾರ್ಯಕರ್ತರೆಲ್ಲರೂ ನಮ್ಮ ಕುಟುಂಬವೇ. ಮುಂದೆ ದೇವೇಗೌಡರು, ರೇವಣ್ಣ, ಇಬ್ರಾಹಿಂ ನಾನು ಕೂತು ತೀರ್ಮಾನ ಮಾಡ್ತಿವಿ ಎಂದು ಹೇಳಿದರು.
HD Kumaraswamy slams CM Bommi for using inaaporatire words during the rally held at chikkaballapura district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm