ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm