ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm