ಬ್ರೇಕಿಂಗ್ ನ್ಯೂಸ್
15-09-22 12:01 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಆಯ್ಕೆ ಕುರಿತು ಸೆ.16 ರಂದು ಶುಕ್ರವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಂತರಿಕ ಚುನಾವಣೆ ನಡೆಯಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಪುನರಾಯ್ಕೆ ಆಗಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ನಡೆದಲ್ಲಿ ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮಂದಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇದಾಗದಿದ್ದರೆ, ಎಐಸಿಸಿ ನೀಡುವ ಸಂದೇಶದ ಅನುಸಾರ ಒಂದೇ ಸಾಲಿನಲ್ಲಿ ನಿರ್ಣಯ ತೆಗೆದುಕೊಂಡು ಡಿ.ಕೆ.ಶಿವಕುಮಾರ್ ಅವರನ್ನೇ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರೆಸುವ ಸಾಧ್ಯತೆಯೂ ಇರುತ್ತದೆ.
ಈ ಬಗ್ಗೆ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿದ್ದು, ಕೆಪಿಸಿಸಿ ಸದಸ್ಯರೆಲ್ಲರೂ ಸೆ.16 ರಂದು ನಡೆಯಲಿರುವ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಮೂಲಗಳ ಪ್ರಕಾರ, ಸೆ.16 ರಂದು ಅವಿರೋಧವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಒಂದು ವೇಳೆ ಅನಿರೀಕ್ಷಿತ ಬೆಳವಣಿಗೆಗಳು ನಡೆದು ಬೇರೆ ಯಾರಾದರೂ ಸ್ಪರ್ಧೆಗೆ ಆಸಕ್ತಿ ತೋರಿದರೆ ಮಾತ್ರ ಚುನಾವಣೆ ನಡೆಯಲಿದೆ. ಇಲ್ಲದಿದ್ದರೆ ಚುನಾವಣೆ ನಡೆಸದೆ ಅಧ್ಯಕ್ಷರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರ್ಣಗೊಂಡಿದೆ. ಕಾಂಗ್ರೆಸ್ ಬೈಲಾ ಪ್ರಕಾರ, ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಬೇಕು. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ. ಹೀಗಾಗಿ ಶಿವಕುಮಾರ್ ಅವರೇ ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
The election for the post of Karnataka Pradesh Congress Committee President (KPCC) will be held on September 16, chief of the party's state unit, D K Shivakumar said on Monday.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm