ಬ್ರೇಕಿಂಗ್ ನ್ಯೂಸ್
15-09-22 02:35 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.



ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm