ಬ್ರೇಕಿಂಗ್ ನ್ಯೂಸ್
15-09-22 02:35 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.



ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.
Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm