ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm