ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am