ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm