ಬ್ರೇಕಿಂಗ್ ನ್ಯೂಸ್
08-10-20 01:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 08: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ರಾತ್ರಿ 7.40ರ ಸುಮಾರಿಗೆ ಘಟನೆ ನಡೆದಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ಸಹ ಪ್ರಯಾಣಿಕರಾಗಿದ್ದ ಗೈನಕಾಲಜಿಸ್ಟ್ ವೈದ್ಯರೊಬ್ಬರು ಮತ್ತು ಜೊತೆಗಿದ್ದ ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಮಹಿಳೆಗೆ 9 ತಿಂಗಳು ಪೂರ್ತಿಯಾಗಿರಲಿಲ್ಲ. ಆದರೆ, ಹೆರಿಗೆ ಹತ್ತಿರ ಬಂದಿರುವ ವೇಳೆ ಗರ್ಭಿಣಿಯರನ್ನು ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವುದಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಇಲ್ಲಿ ಹೇಗೆ ಅವಕಾಶ ನೀಡಿದ್ದಾರೆ ಎಂದು ವೈದ್ಯರು ಪ್ರಶ್ನೆ ಮಾಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯದಲ್ಲಿದ್ದು, 8 ಗಂಟೆ ಸುಮಾರಿಗೆ ವಿಮಾನ ಬೆಂಗಳೂರು ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ, ಮಗುವನ್ನು ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಮಾನ ಪ್ರಯಾಣ ಸಂದರ್ಭದಲ್ಲಿನ ಏರಿಳಿತದಿಂದಾಗಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.
ವಿಮಾನದಲ್ಲಿ ಹೆರಿಗೆಯಾಗಿದ್ದರಿಂದ ಮಗುವಿಗೆ ಉಚಿತ ಪ್ರಯಾಣದ ಸೌಲಭ್ಯ ಸಿಕ್ಕಿದೆ. ಹೀಗಾಗಿ ಆ ಮಗುವಿಗೆ ಜೀವಮಾನ ಪೂರ್ತಿ ಉಚಿತ ವಿಮಾನ ಪ್ರಯಾಣದ ಅವಕಾಶ ನೀಡಬೇಕೆಂದು ಜಾಲತಾಣದಲ್ಲಿ ಕೆಲವರು ಟ್ವೀಟ್ ಮಾಡಿದ್ದಾರೆ. ಹಿಂದೊಮ್ಮೆ ಎರಡು ಬಾರಿ ಇಂತಹ ನಿದರ್ಶನ ಆಗಿತ್ತು. 2017ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಬರುತ್ತಿದ್ದ ಜೆಟ್ ಏರ್ವೇಸ್ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಜೆಟ್ ಏರ್ವೇಸ್ ವಿಮಾನ ಕಂಪೆನಿ, ಮಗುವಿನ ಜೀವಮಾನ ಪೂರ್ತಿ ಉಚಿತ ಪ್ರಯಾಣದ ಆಫರ್ ನೀಡಿತ್ತು. 20009ರಲ್ಲಿ ಏರ್ ಏಶ್ಯಾ ವಿಮಾನ ಕಂಪೆನಿ, ಮಲೇಶ್ಯಾದ ಮಹಿಳೆಯೊಬ್ಬಳು ಹೆರಿಗೆಯಾದ ಸಂದರ್ಭದಲ್ಲಿ ಮಗುವಿಗೆ ಇಂಥದ್ದೇ ಆಫರ್ ನೀಡಿತ್ತು.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 08:45 pm
Mangalore Correspondent
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm