ಬ್ರೇಕಿಂಗ್ ನ್ಯೂಸ್
15-09-22 09:31 pm Bengalore Correspondent ಕರ್ನಾಟಕ
ಬೆಂಗಳೂರು, ಸೆ.15: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ವಿಧಾನ ಪರಿಷತ್ ನಲ್ಲಿ ಅಂಗೀಕಾರ ಮಾಡಲಾಗಿದೆ.
ಆದರೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಕಾಯ್ದೆಯ ಪ್ರತಿಗಳನ್ನು ಹರಿದು ಹಾಕುವ ಮೂಲಕ ಆಕ್ರೋಶ ತೋರಿದರಲ್ಲದೆ, ಅಧಿವೇಶನದಿಂದ ಸಭಾತ್ಯಾಗ ಮಾಡಿ ಹೊರನಡೆದರು. ಈ ವೇಳೆ ಬಿಜೆಪಿ ಸದಸ್ಯರು ಭಾರತ್ ಮಾತಾಕೀ ಜೈ, ಹಿಂದೂ ವಿರೋಧಿ, ದೇಶದ್ರೋಹಿ ಕಾಂಗ್ರೆಸ್ ಗೆ ಧಿಕ್ಕಾರ ಎಂದು ಕೂಗಿದರು. ಗದ್ದಲದ ಮಧ್ಯೆ ಕಲಾಪವನ್ನು ಸಭಾಪತಿ ನಾಳೆಗೆ ಮುಂದೂಡಿದರು.

ಮಸೂದೆಯ ಬಿಲ್ ಪ್ರತಿಯನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಜನವಿರೋಧಿ ಸರಕಾರ ಎಂದು ಹರಿಹಾಯ್ದಿದ್ದಾರೆ.
ಮಸೂದೆ ಪ್ರಕಾರ, ಬಲವಂತ, ಆಮಿಷ ಮತ್ತು ಮದುವೆಯಾಗುವ ಭರವಸೆ ನೀಡಿ ನಡೆಸುವ ಮತಾಂತರ ಕಾರ್ಯಕ್ಕೆ ನಿಷೇಧವಿದೆ. ಮತಾಂತರಗೊಂಡ ವ್ಯಕ್ತಿಯ ಮನೆಯವರು ಅಥವಾ ಆಪ್ತರು ಪೊಲೀಸ್ ದೂರು ನೀಡಿದರೆ ಎಫ್ಐಆರ್ ದಾಖಲಾಗುವುದು. ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ ಮತ್ತು 25,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ, ಕಾನೂನು ಪ್ರಕಾರ ಮತಾಂತರ ಆಗುವುದಿದ್ದರೂ ವ್ಯಕ್ತಿ ಎರಡು ತಿಂಗಳ ಮೊದಲೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗೆ ತಿಳಿಸಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. 30 ದಿನಗಳ ಒಳಗೆ ಆಕ್ಷೇಪಣೆ ಬಂದರೆ ಕಂದಾಯ ಇಲಾಖೆಯಿಂದ ವಿಚಾರಣೆ ನಡೆಸಬೇಕು. ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ.
ಕಳೆದ ಬೆಳಗಾವಿ ಅಧಿವೇಶನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗಿತ್ತು. ಆನಂತರ, ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಆಗಿರಲಿಲ್ಲ. ಇಂದು ವಿಪಕ್ಷಗಳ ವಿರೋಧ ನಡುವೆಯೂ ಧ್ವನಿಮತದಿಂದ ಅನುಮತಿಸಿ, ಮಸೂದೆಗೆ ಅಂಗೀಕಾರ ನೀಡಲಾಗಿದೆ.
The bill was tabled in the upper House earlier in the day by home minister Araga Jnanendra. The bill was earlier passed in the Assembly in December, last year, but was not presented in the council due to the lack of majority. Pending passage in the upper House, the Basavaraj Bommai-led BJP dispensation had subsequently promulgated an ordinance in May this year to give effect to the bill.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm