ಬ್ರೇಕಿಂಗ್ ನ್ಯೂಸ್
16-09-22 12:17 pm HK News Desk ಕರ್ನಾಟಕ
ಬೆಂಗಳೂರು, ಸೆ.16 : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರಿಗೆ ನೀಡಿರುವ ಷರತ್ತಿನ ಜಾಮೀನು ರದ್ದುಗೊಳಿಸುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಗಳು ಜನಾರ್ದನ ರೆಡ್ಡಿ ಪ್ರಭಾವದಿಂದಾಗಿ ಪ್ರಕರಣವನ್ನು ಅಡ್ಡದಾರಿ ಹಿಡಿಯುವಂತೆ ಮಾಡುತ್ತಿವೆ. ಹೀಗಾಗಿ ರೆಡ್ಡಿ ಅವರನ್ನು ಬಳ್ಳಾರಿಯಿಂದ ಹೊರಗೆ ಕಳುಹಿಸುವಂತೆ ಸಿಬಿಐ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎ-2 ಆರೋಪಿ ಆಗಿರುವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಹತ್ತು ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಆಗಸ್ಟ್ 19ರಂದು ಅವಕಾಶ ನೀಡಿತ್ತು.
ಆದರೆ ಬಳ್ಳಾರಿಯಲ್ಲಿ ಬೀಡುಬಿಟ್ಟಿರುವ ಗಾಲಿ ಜನಾರ್ದನರೆಡ್ಡಿ ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಪ್ರಧಾನ ಸಾಕ್ಷಿ ಶ್ಯಾಮಪ್ರಸಾದ್ ಗೆ ಬೆದರಿಕೆ ಕರೆಗಳು ಬಂದಿವೆ. ಅವರಿಗೆ ಗಾಲಿ ಜನಾರ್ದನ ರೆಡ್ಡಿ ಅವರಿಂದ ಸಂದೇಶ ಬಂದಿದೆ ಎಂದು ಸಿಬಿಐ ಅಧಿಕಾರಿಗಳು ಕೋರ್ಟಿನಲ್ಲಿ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ರಕ್ಷಣೆ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಶ್ಯಾಮ್ ಪ್ರಸಾದ್ ಮನವಿ ಮಾಡಿದ್ದಾರೆ. ಮತ್ತೊಬ್ಬ ಸಾಕ್ಷಿದಾರರಿಗೂ ಬಂದಿರುವ ಬೆದರಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.
2007ರಂದು ಗಾಲಿ ಜನಾರ್ದನ್ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ 18.75 ಕೋಟಿ ರೂಪಾಯಿ ತೆರಿಗೆ ವಂಚನೆ ಕಂಡುಬಂದಿತ್ತು. ಇದಲ್ಲದೆ, ಕರ್ನಾಟಕ ಲೋಕಾಯುಕ್ತದಲ್ಲೂ ಪ್ರಕರಣ ದಾಖಲಾಗಿ ರೆಡ್ಡಿ ಜೈಲು ಪಾಲಾಗಿದ್ದರು. ಆನಂತರ ಸಿಬಿಐ ಮತ್ತು ಇಡಿ ತನಿಖೆ ಆರಂಭಗೊಂಡಿತ್ತು.
The Supreme Court on Wednesday said that the 12-year delay in proceeding with the trial against former Karnataka minister Gali Janardhan Reddy in a serious offence involving illegal mining amounts to a “travesty of justice” and demanded a report from the trial judge on why the matter has not proceeded despite a clear direction from the top court a year ago to expedite the trial.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm