ಬ್ರೇಕಿಂಗ್ ನ್ಯೂಸ್
08-10-20 04:02 pm Mysore Correspondent ಕರ್ನಾಟಕ
ಮೈಸೂರು, ಅಕ್ಟೋಬರ್ 08: 1960ರ ವೇಳೆಗೆ ಆಹಾರಕ್ಕಾಗಿ ನಮ್ಮ ದೇಶ ಇತರರ ಬಳಿ ಭಿಕ್ಷೆ ಬೇಡುವ ಸ್ಥಿತಿ ಇತ್ತು. ಈಗ ಇಡೀ ಜಗತ್ತಿಗೆ ಆಹಾರ ಪೂರೈಸುವ ಶಕ್ತಿ ಹೊಂದಿದ್ದೇವೆ. ಆದರೆ, ಕಾಂಗ್ರೆಸ್ನವರು ಮಾತ್ರ ರೈತರ ಹಾದಿ ತಪ್ಪಿಸಿ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
‘ಇದೇ ವಿಚಾರವನ್ನು ಹಿಂದೆ ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿತ್ತು. ಈಗ ಮಾತ್ರ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ದ್ವಂದ್ವದ ಬಗ್ಗೆ ಮತ್ತು ಮಸೂದೆಯ ಲಾಭದ ಬಗ್ಗೆ ಪ್ರತಿ ರೈತನ ಮನೆಗೆ ತೆರಳಿ ಹೇಳುತ್ತೇವೆ. ಕೃಷಿ ಮಸೂದೆಗಳ ಉದ್ದೇಶ ತಿಳಿಸಿಕೊಡಲಿದ್ದೇವೆ. ರೈತ ಮುಖಂಡರು ಚರ್ಚೆಗೆ ಬಂದರೂ ಸಿದ್ಧ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವೇಳೆ 49 ಕಾರ್ಪೊರೇಟ್ ಕಂಪನಿಗಳಿಗೆ ಪರವಾನಗಿ ಕೊಟ್ಟಿದ್ದರು. ವಿವಿಧ ಸ್ವರೂಪದಲ್ಲಿ ಲಾಭ ಮಾಡಿಕೊಟ್ಟಿದ್ದರು. ಈಗ ನಮ್ಮ ನಿಲುವನ್ನು ಪ್ರಶ್ನಿಸುತ್ತಿದ್ದಾರೆ. ಕೊಳಕಿನಲ್ಲಿ ಮಲಗಿದ ಕೋಣನಿಗೆ ಒಂದು ಏಟು ಬಿದ್ದರೆ ಎಲ್ಲೋ ಪೆಟ್ಟು ಬಿದ್ದ ರೀತಿ ಕೇಳುತ್ತದೆ. ಎರಡು ಮತ್ತು ಮೂರನೇ ಏಟು ಬಿದ್ದಾಗ ಚೂರು ಎಚ್ಚರ ಆಗುತ್ತದೆ. ನಾಲ್ಕನೇ ಏಟು ಬಿದ್ದಾಗ ತನಗೇ ಪೆಟ್ಟು ಬಿದ್ದಿರುವುದೆಂದು ಅರಿವಿಗೆ ಬರುತ್ತದೆ. ಕಾಂಗ್ರೆಸ್ನವರಿಗೆ ಈಗ ನಾಲ್ಕನೇ ಏಟು ಬಿದ್ದಿದೆ. ಈಗಷ್ಟೇ ಎಚ್ಚೆತ್ತುಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಹಿಂದೆ ನಮಗೆ ಬೇಕಾದಷ್ಟು ಆಹಾರ ದೇಶದಲ್ಲಿ ಸಿಗುತ್ತಿರಲಿಲ್ಲ. ಇಷ್ಟಾದರೂ ಕಾಂಗ್ರೆಸ್ನವರು ಪರ್ಯಾಯ ಹುಡುಕಲಿಲ್ಲ. ಕಾನೂನಿನ ಅಂಶಕ್ಕೆ ತಿದ್ದುಪಡಿಯನ್ನೂ ತಂದಿರಲಿಲ್ಲ. 1990ರ ಉದಾರೀಕರಣ ಜಾರಿಗೆ ತಂದಾಗಲೂ ರೈತರಿಗೆ ನೆರವು ಸಿಗಲಿಲ್ಲ. ಈಗ ಕೃಷಿ ಮಸೂದೆಗಳನ್ನು ಪರಿವರ್ತಿಸಿ, ರೈತರಿಗೆ ಸ್ವಾಭಿಮಾನ ನೀಡುವ ಮಸೂದೆ ತಂದಿದ್ದೇವೆ ಎಂದು ಕೃಷಿ ಮಸೂದೆಗಳ ಪರವಾಗಿ ಬ್ಯಾಟಿಂಗ್ ಮಾಡಿದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am