ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm