ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm