ಬ್ರೇಕಿಂಗ್ ನ್ಯೂಸ್
17-09-22 08:28 pm HK News Desk ಕರ್ನಾಟಕ
ಮಂಡ್ಯ, ಸೆ.17 : ರಾಜ್ಯದಲ್ಲಿ ಕಳೆದ ಬಾರಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದಾರೆ. ಕೃಷ್ಣಾ ನದಿಯ ನೀರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುವ ಬಗ್ಗೆ ಡಿಕೆಶಿ ಮಂಡ್ಯದಲ್ಲಿ ಸುಳಿವು ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಅಣತಿಯಂತೆ ಮೇಕೆದಾಟು ಪಾದಯಾತ್ರೆ ನಡೆದಿತ್ತು. ಕೃಷ್ಣಾ ನೀರಾವರಿ ಯೋಜನೆ ಬಗ್ಗೆ ಪಾದಯಾತ್ರೆಗೆ ಸಿದ್ಧತೆ ನಡೆಸಲು ಆ ಭಾಗದ ನಾಯಕರಿಗೆ ಹೇಳಿದ್ದೆ. ಇನ್ನೂ ಅದರ ತಯಾರಿ ಆರಂಭವಾಗಿಲ್ಲ. ಭಾರತ್ ಜೋಡೊ ಯಾತ್ರೆ ಮುಗಿದ ಬೆನ್ನಲ್ಲೇ ನಾನೇ ನೇತೃತ್ವ ತೆಗೆದುಕೊಳ್ತೀನಿ. ಕೃಷ್ಣಾ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡ್ತೇವೆ ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದ್ದಾರೆ.
ಆಯಮ್ಮ ಮಾತಾಡ್ವಾಗ ಖಾಲಿ ಚೇರ್ ಅಷ್ಟೇ ಇದ್ದುವಂತೆ !

ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದ ಕುರಿತು ಕೇಳಿದ ಪ್ರಶ್ನೆಗೆ ಡಿಕೆಶಿ ವ್ಯಂಗ್ಯವಾಡಿದರು. ಅದ್ಯಾರೋ ಸ್ಮೃತಿ ಇರಾನಿಯಂತೆ. ಆಯಮ್ಮ ಮಾತನಾಡುವಾಗ ಜನಾನೇ ಇರ್ಲಿಲ್ಲ. ಎಲ್ಲಾ ಬರಿ ಖಾಲಿ ಖಾಲಿ ಚೇರ್ ಗಳಂತೆ. ಏನ್ ಜನಸ್ಪಂದನ ಮಾಡ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ವ್ಯಂಗವಾಡಿದರು.
ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಲಾಗಿತ್ತು. ನಮ್ಮ ರಾಜ್ಯದಲ್ಲಿ 22 ದಿನ ಭಾರತ್ ಜೋಡೋ ಯಾತ್ರೆ ಇದೆ. ಯಾತ್ರೆಗೆ ಯಾವ ಕಾರ್ಯಕರ್ತನೂ ಹೂವಿನ ಹಾರ ತರಬೇಡಿ. ಯಾರು ಹೂವಿನ ಹಾರ ಹಾಕಲು ಅವಕಾಶ ಇಲ್ಲ. ಹೂವಿನ ಹಾರ ಹಾಕಿಸಿಕೊಳ್ಳಲು ಪೊಲೀಸ್ ಹಾಗೂ ಸೆಕ್ಯೂರಿಟಿ ಬಿಡಲ್ಲ. ನಿಮ್ಮ ಅಭಿಮಾನ ಪ್ರೀತಿ ಜನ ಸಂಘಟನೆಯಲ್ಲಿ ಇರಲಿ ಅಷ್ಟೇ ಎಂದು ಹೇಳಿದರು.
ಇದೇ ವೇಳೆ, ಪಕ್ಷದ ಕಾರ್ಯಕರ್ತರ ಬಗ್ಗೆ ಅವಹೇಳನ ಮಾತನಾಡಿದ ಶಾಸಕ ಕೆಜಿಎಫ್ ಬಾಬು ಬಗ್ಗೆ ಡಿಕೆಶಿ ಕೆಂಡಮಂಡಲ ಆಗಿದ್ದಾರೆ. ಅವನ್ನಾ ಸಸ್ಪೆಂಡ್ ಮಾಡಿ ಬಿಡ್ತೀನಿ. ನಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ಬೈದ್ರೆ ಸಸ್ಪೆಂಡ್ ಮಾಡ್ತೀನಿ ಎಂದು ಕಿಡಿಕಾರಿದ್ದಾರೆ.
The simmering tension within the Karnataka unit of Congress has come to the fore as the party gears up to welcome Rahul Gandhi-led ‘Bharat Jodo Yatra’ into the state on September 30.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm