ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm