ಬ್ರೇಕಿಂಗ್ ನ್ಯೂಸ್
18-09-22 12:10 pm HK News Desk ಕರ್ನಾಟಕ
ಮಂಡ್ಯ, ಸೆ.17 : ನವಜಾತ ಶಿಶುವೊಂದು ಪಾಳು ಬಾವಿಯಲ್ಲಿ ಪತ್ತೆಯಾಗಿದ್ದು 30 ಅಡಿ ಆಳದ ಬಾವಿಗೆ ಬಿದ್ದರೂ ಪವಾಡ ಸದೃಶ ಬದುಕುಳಿದ ಘಟನೆ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯ ಪಾಳುಬಾವಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿ ರೈತ ಮಹಿಳೆಯರು ಬಂದು ಇಣುಕಿದಾಗ ಬಾವಿಯಲ್ಲಿ ಮಗು ಕಂಡುಬಂದಿದೆ. ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗುವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಸ ಕಡ್ಡಿಯೇ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ ರೀತಿಯಲ್ಲಿ ಶಿಶು ಬದುಕುಳಿದಿದೆ. ಆಗ ತಾನೇ ಜನಿಸಿರುವ ಗಂಡು ಮಗು ಇದಾಗಿದ್ದು ಅದನ್ನು ಪಾಳು ಬಾವಿಗೆ ಎಸೆದವರು ಯಾರು ಎಂಬ ಬಗ್ಗೆ ತನಿಖೆ ಆರಂಭಗೊಂಡಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಲ್ಲಿ ಇರುವೆ ಕಚ್ಚಿರುವ ಗುರುತುಗಳಿವೆ. ಬಾವಿಯಲ್ಲಿ ಪ್ಲಾಸ್ಟಿಕ್, ಪೇಪರ್ ಇನ್ನಿತರ ಕಸಗಳನ್ನು ಎಸೆಯಲಾಗಿದ್ದು ಹೀಗಾಗಿ ಕೆಳಕ್ಕೆ ಬಿದ್ದ ಮಗುವಿಗೆ ಹೆಚ್ಚೇನು ಗಾಯಗಳಾಗದೆ ಬದುಕುಳಿದಿದೆ. ಬೆಳಗ್ಗಿನ ಹೊತ್ತಿಗೆ ಮಗುವನ್ನು ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದವರ ಬಗ್ಗೆ ಹುಡುಕಾಟ ನಡೆದಿದೆ.
Newborn baby thrown into 30 feet well in Mandya, luckily survives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm