ಬ್ರೇಕಿಂಗ್ ನ್ಯೂಸ್
18-09-22 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18 : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ 40 ಪರ್ಸೆಂಟ್ ಕಮಿಷನ್ ಆರೋಪ, ಇದೀಗ ರಾಜ್ಯದ ಗಡಿ ದಾಟಿ ತೆಲಂಗಾಣಕ್ಕೂ ಕಾಲಿಟ್ಟಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ʼವೆಲ್ಕಂ ಟು 40 ಪರ್ಸೆಂಟ್ ಸಿಎಂʼ ಎಂಬ ಫ್ಲೆಕ್ಸ್ ಅಳವಡಿಸಲಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ತಂದಿಟ್ಟಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಈ ನಡುವೆ, ಬಿಜೆಪಿಯನ್ನು ಅಣಕಿಸಲು ತೆಲಂಗಾಣದ ಆಡಳಿತಾರೂಢ ಟಿಆರ್ಎಸ್ ಪಕ್ಷದ ಕಾರ್ಯಕರ್ತರು ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಎಂದು ಫ್ಲೆಕ್ಸ್ ಅಳವಡಿಸಿ, ಹೊಸ ವಿವಾದ ಸೃಷ್ಟಿಸಿದೆ.

ಶನಿವಾರ ಹೈದರಾಬಾದ್ ವಿಮೋಚನಾ ದಿನಾಚರಣೆ ಪ್ತಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಪರೇಡ್ ಮೈದಾನದಲ್ಲಿ ಭಾಷಣ ಮಾಡಿದ್ದರು. ಅದಕ್ಕೂ ಮೊದಲೇ ಈ ಬೃಹತ್ ಫಲಕವನ್ನು ಅಲ್ಲಿ ಅಳವಡಿಸಿತ್ತು ಎನ್ನಲಾಗಿದೆ.

ಕರ್ನಾಟಕದ ಗೌರವ ಮಣ್ಣುಪಾಲು
ಹೈದರಾಬಾದ್ನಲ್ಲಿ ಅಳವಡಿಸಿರುವ ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಬೋರ್ಡ್, ಪ್ರತಿಪಕ್ಷ ಕಾಂಗ್ರೆಸ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೊಸ ಅಸ್ತ್ರವನ್ನು ಒದಗಿಸಿದೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಬಿಜೆಪಿ ರಾಜ್ಯಕ್ಕಿದ್ದ ಗೌರವ ಮಣ್ಣು ಪಾಲು ಮಾಡಿದೆ. ಕರ್ನಾಟಕಕ್ಕೆ ಇದ್ದ ಪ್ರಗತಿಪರರ ನಾಡು ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ. ಮುಖ್ಯಮಂತ್ರಿ ಈ ಅವಮಾನವನ್ನು ತಡೆದುಕೊಂಡಿರುವುದು ಆಶ್ಚರ್ಯ ಎಂದು ಕೆಣಕಿದೆ.
#40PercentSarkara ದ ಕುಖ್ಯಾತಿ ದೇಶದೆಲ್ಲೆಡೆ ಪಸರಿಸಿದೆ!
— Karnataka Congress (@INCKarnataka) September 18, 2022
ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಇದ್ದ ಪ್ರಜ್ಞಾವಂತರ ನಾಡು, ಪ್ರಗತಿಪರ ರಾಜ್ಯ ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ.
ಭ್ರಷ್ಟಾಚಾರದ ಮಹಾಪೋಷಕರಾದ
ಸಿಎಂಗೆ ತೆಲಂಗಾಣದಲ್ಲಿನ ಈ ಬೋರ್ಡ್ಗಳನ್ನು ವಿರೋಧಿಸುವ ದಮ್ ಇಲ್ಲದಾಗಿದೆ. pic.twitter.com/mybrqUg4XQ
Karnataka Chief Minister Basavaraj Bommai is apparently being welcomed to the statewide celebration of Hyderabad Liberation Day with a tinge of mockery by the Telangana Rashtriya Samiti (TRS).A huge banner, which has been put up near the parade grounds in Secundarabad, carries the words, “Welcome to 40% CM”. Seen a little closer, the message reads, “Welcome to 40% ComMission”!
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm