ಬ್ರೇಕಿಂಗ್ ನ್ಯೂಸ್
18-09-22 05:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18 : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ 40 ಪರ್ಸೆಂಟ್ ಕಮಿಷನ್ ಆರೋಪ, ಇದೀಗ ರಾಜ್ಯದ ಗಡಿ ದಾಟಿ ತೆಲಂಗಾಣಕ್ಕೂ ಕಾಲಿಟ್ಟಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ʼವೆಲ್ಕಂ ಟು 40 ಪರ್ಸೆಂಟ್ ಸಿಎಂʼ ಎಂಬ ಫ್ಲೆಕ್ಸ್ ಅಳವಡಿಸಲಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ತಂದಿಟ್ಟಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಈ ನಡುವೆ, ಬಿಜೆಪಿಯನ್ನು ಅಣಕಿಸಲು ತೆಲಂಗಾಣದ ಆಡಳಿತಾರೂಢ ಟಿಆರ್ಎಸ್ ಪಕ್ಷದ ಕಾರ್ಯಕರ್ತರು ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಎಂದು ಫ್ಲೆಕ್ಸ್ ಅಳವಡಿಸಿ, ಹೊಸ ವಿವಾದ ಸೃಷ್ಟಿಸಿದೆ.
ಶನಿವಾರ ಹೈದರಾಬಾದ್ ವಿಮೋಚನಾ ದಿನಾಚರಣೆ ಪ್ತಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೈದರಾಬಾದ್ ಪರೇಡ್ ಮೈದಾನದಲ್ಲಿ ಭಾಷಣ ಮಾಡಿದ್ದರು. ಅದಕ್ಕೂ ಮೊದಲೇ ಈ ಬೃಹತ್ ಫಲಕವನ್ನು ಅಲ್ಲಿ ಅಳವಡಿಸಿತ್ತು ಎನ್ನಲಾಗಿದೆ.
ಕರ್ನಾಟಕದ ಗೌರವ ಮಣ್ಣುಪಾಲು
ಹೈದರಾಬಾದ್ನಲ್ಲಿ ಅಳವಡಿಸಿರುವ ʼ40 ಪರ್ಸೆಂಟ್ ಸಿಎಂಗೆ ಸ್ವಾಗತʼ ಬೋರ್ಡ್, ಪ್ರತಿಪಕ್ಷ ಕಾಂಗ್ರೆಸ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೊಸ ಅಸ್ತ್ರವನ್ನು ಒದಗಿಸಿದೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಬಿಜೆಪಿ ರಾಜ್ಯಕ್ಕಿದ್ದ ಗೌರವ ಮಣ್ಣು ಪಾಲು ಮಾಡಿದೆ. ಕರ್ನಾಟಕಕ್ಕೆ ಇದ್ದ ಪ್ರಗತಿಪರರ ನಾಡು ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ. ಮುಖ್ಯಮಂತ್ರಿ ಈ ಅವಮಾನವನ್ನು ತಡೆದುಕೊಂಡಿರುವುದು ಆಶ್ಚರ್ಯ ಎಂದು ಕೆಣಕಿದೆ.
#40PercentSarkara ದ ಕುಖ್ಯಾತಿ ದೇಶದೆಲ್ಲೆಡೆ ಪಸರಿಸಿದೆ!
— Karnataka Congress (@INCKarnataka) September 18, 2022
ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಇದ್ದ ಪ್ರಜ್ಞಾವಂತರ ನಾಡು, ಪ್ರಗತಿಪರ ರಾಜ್ಯ ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ.
ಭ್ರಷ್ಟಾಚಾರದ ಮಹಾಪೋಷಕರಾದ
ಸಿಎಂಗೆ ತೆಲಂಗಾಣದಲ್ಲಿನ ಈ ಬೋರ್ಡ್ಗಳನ್ನು ವಿರೋಧಿಸುವ ದಮ್ ಇಲ್ಲದಾಗಿದೆ. pic.twitter.com/mybrqUg4XQ
Karnataka Chief Minister Basavaraj Bommai is apparently being welcomed to the statewide celebration of Hyderabad Liberation Day with a tinge of mockery by the Telangana Rashtriya Samiti (TRS).A huge banner, which has been put up near the parade grounds in Secundarabad, carries the words, “Welcome to 40% CM”. Seen a little closer, the message reads, “Welcome to 40% ComMission”!
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm