ಬ್ರೇಕಿಂಗ್ ನ್ಯೂಸ್
18-09-22 07:51 pm HK News Desk ಕರ್ನಾಟಕ
ಕೋಲಾರ, ಸೆ.18 : ಕೋಲಾರ ಇಟಿಸಿಎಂ ಆಸ್ಪತ್ರೆ ಲೆಕ್ಕಾಧಿಕಾರಿಯ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು ಚರ್ಚ್ ಪಾದ್ರಿಯೊಬ್ಬರು ಸೇರಿದಂತೆ ಅವರ ಕುಮ್ಮಕ್ಕಿನಿಂದ ದೂರು ನೀಡಿದ್ದ ವಿದ್ಯಾರ್ಥಿನಿಯರೇ ಬಂಧನಕ್ಕೊಳಗಾಗಿದ್ದಾರೆ.
ಘಟನೆ ಸಂಬಂಧಿಸಿ ಆರೋಪಕ್ಕೊಳಗಾಗಿದ್ದ ಜಾನ್ಸನ್ ಕುಂದರ್ ಪತ್ನಿ ಸವಿತಾ ಜಾನ್ ಪೊಲೀಸರಿಗೆ ಪ್ರತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿನಿಯರಾದ ಜೆನಿಫರ್ ಹಾಗೂ ಮಂಜು, ಹಾಸ್ಟೆಲ್ ವಾರ್ಡನ್ ಶೀಲಾ, ಕುಮ್ಮಕ್ಕು ನೀಡಿದ್ದ ಮೆಥೋಡಿಸ್ಟ್ ಚರ್ಚ್ ಪಾದ್ರಿ ರೆವರೆಂಡ್ ಶಾಂತಕುಮಾರ್ ಅವರನ್ನು ಬಂಧಿಸಿದ್ದಾರೆ.

ಆಸ್ಪತ್ರೆ ಲೆಕ್ಕಾಧಿಕಾರಿ ಜಾನ್ ಕುಂದರ್ ಜೊತೆ ವೈರತ್ವ ಹೊಂದಿದ್ದ ಪಾದ್ರಿ ಶಾಂತ ಕುಮಾರ್ ನಕಲಿ ವಿದ್ಯಾರ್ಥಿನಿಯರ ಮೂಲಕ ದೂರು ಕೊಡಿಸಿದ್ದ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿದ್ದರಿಂದ ಜಾನ್ಸನ್ ಕುಂದರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ ಜಾನ್ ಕುಂದರ್ ಪತ್ನಿಯೂ ಪ್ರತಿ ದೂರು ನೀಡಿದ್ದರು.

ಮೊದಲಿಗೆ, ಕೋಲಾರ ಮಹಿಳಾ ಠಾಣೆಯಲ್ಲಿ ಆಗಸ್ಟ್ 30 ರಂದು ಜಾನ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ದೂರು ನೀಡಿದ್ದ ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲು ಮಾಡಿಸಲಾಗಿತ್ತು. ಇದೇ ವೇಳೆ, ಸವಿತಾ ಜಾನ್ ಎಸ್ಪಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ದೂರು ನೀಡಿದವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಸುಳ್ಳು ದೂರೆಂದು ಸಾಬೀತಾಗಿದೆ. ಅಲ್ಲದೆ, ಕುಮ್ಮಕ್ಕು ನೀಡಿದವರ ಬಗ್ಗೆಯೂ ಮಾಹಿತಿ ಲಭಿಸಿದೆ. ಅದರಂತೆ, ಪಾದ್ರಿ ಶಾಂತಕುಮಾರ್, ವಾರ್ಡನ್ ಶೀಲಾ ಸೇರಿ ನಾಲ್ವರನ್ನು ಕೋಲಾರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
The city police have arrested four people, including Methodist Church pastor Reverend Shanthakumar, in connection with the case of sexual harassment by the accountant of ETCM Hospital, which has a history of 100 years.Shanthakumar and three women involved in the fake case have been arrested after a false case was filed against ETCM Hospital ex-accountant Johnson by a fake student.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm