www.40percentsarkara.com.
">ಬ್ರೇಕಿಂಗ್ ನ್ಯೂಸ್
21-09-22 04:33 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ರಾಜ್ಯ ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಸದನದಲ್ಲಿ ಹೋರಾಟ ನಡೆಸುತ್ತಿರುವಂತೆಯೇ ಕಾಂಗ್ರೆಸ್ ಬೆಂಗಳೂರು ನಗರದಲ್ಲಿ ನಲ್ವತ್ತು ಪರ್ಸೆಂಟ್ ಹೆಸರಲ್ಲಿ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿಯನ್ನು ಅಣಕಿಸುವ ಕೆಲಸ ಮಾಡಿದೆ. ಬೆಂಗಳೂರು ನಗರದಾದ್ಯಂತ ಬಸ್ ನಿಲ್ದಾಣ, ಸಾರ್ವಜನಿಕ ಪ್ರದೇಶದಲ್ಲಿ ಪೇ ಸಿಎಂ ಹೆಸರಲ್ಲಿ ಬೊಮ್ಮಾಯಿ ಅವರ ನೆಗೆಟಿವ್ ಚಿತ್ರ ಬಳಸಿ ಪೋಸ್ಟರ್ ಚಿತ್ರಿಸಿದೆ.
ಪೇಟಿಎಂ ರೀತಿಯಲ್ಲೇ ಕ್ಯುಆರ್ ಕೋಡನ್ನು ಪೋಸ್ಟರಲ್ಲಿ ನೀಡಲಾಗಿದ್ದು, ಅದನ್ನು ಮೊಬೈಲಿನಲ್ಲಿ ಸ್ಕ್ಯಾನ್ ಮಾಡಿದರೆ ನೇರವಾಗಿ ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ 40 ಪರ್ಸೆಂಟ್ ಕಮಿಷನ್ ಬಗ್ಗೆ ದೂರು ನೀಡಲು ವೆಬ್ ಸೈಟ್ ಆರಂಭಿಸಿತ್ತು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಕಮಿಷನ್ ದಂಧೆ ಯಾವ ರೀತಿ ಇದೆ, ಅದರಿಂದ ಜನಸಾಮಾನ್ಯರು ಯಾವ ರೀತಿ ತೊಂದರೆ ಎದುರಿಸುತ್ತಿದ್ದಾರೆ ಎಂಬ ಬಗ್ಗೆ ದೂರು ನೀಡಲು ಈ ವೆಬ್ ಸೈಟ್ ಆರಂಭಿಸಿತ್ತು. ಆದರೆ ಆ ವೆಬ್ ಸೈಟ್ ಅಷ್ಟು ಪ್ರಚಾರ ಗಿಟ್ಟಿಸಿಕೊಂಡಿರಲಿಲ್ಲ.
ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಫೋಟೋ ಇರುವಂತೆ ಪೇಟಿಎಂ ಅಪ್ಲಿಕೇಶನ್ ಮಾದರಿಯಲ್ಲಿ ಕ್ಯುಆರ್ ಕೋಡ್ ಚಿತ್ರಿಸಿ ಪೋಸ್ಟರ್ ಮಾಡಲಾಗಿದ್ದು, ಅದನ್ನು ಸಾರ್ವಜನಿಕ ಜಾಗದಲ್ಲಿ ರಾತ್ರೋರಾತ್ರಿ ಅಂಟಿಸಲಾಗಿದೆ. ಬೆಂಗಳೂರು ನಗರದಾದ್ಯಂತ PAY CM ಎನ್ನುವ ಹೆಸರಿನ ಪೋಸ್ಟರನ್ನು ಬಸ್ ನಿಲ್ದಾಣ, ರಸ್ತೆ ಬದಿಯ ಗೋಡೆಗಳಲ್ಲಿ ಅಂಟಿಸಲಾಗಿದೆ. ಆಮೂಲಕ ನಲ್ವತ್ತು ಪರ್ಸೆಂಟ್ ಸರಕಾರ ಎನ್ನುವ ಬಗ್ಗೆ ಬಿಜೆಪಿ ಸರಕಾರವನ್ನು ತೀವ್ರವಾಗಿ ಅಣಕಿಸಲಾಗಿದೆ. ಈ ರೀತಿಯ ಪೋಸ್ಟರ್ ನಿಂದ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.
ಕಳೆದ ವಾರ ಹೈದರಾಬಾದ್ ನಲ್ಲಿ ಇದೇ ರೀತಿ 40 ಪರ್ಸೆಂಟ್ ಸಿಎಂ ಎನ್ನುವ ದೊಡ್ಡ ಪೋಸ್ಟರನ್ನು ಹಾಕಲಾಗಿತ್ತು. ಅಲ್ಲಿ ಆಡಳಿತ ನಡೆಸುತ್ತಿರುವ ಟಿಆರ್ ಎಸ್ ಪಕ್ಷದ ಕಾರ್ಯಕರ್ತರು ಆ ರೀತಿ ಪೋಸ್ಟರ್ ಹಾಕಿದ್ದರು. ಹೈದರಾಬಾದಲ್ಲಿ ಬಿಜೆಪಿ ಕಾರ್ಯಕಾರಿಣಿ ಇದ್ದುದರಿಂದ ಮತ್ತು ಅದಕ್ಕೆ ಕರ್ನಾಟಕದ ಮುಖ್ಯಮಂತ್ರಿ ತೆರಳುತ್ತಾರೆ ಎಂಬ ಹಿನ್ನೆಲೆಯಲ್ಲಿ ಅಣಕಿಸುವ ಪೋಸ್ಟರ್ ಹಾಕಲಾಗಿತ್ತು. ಆದರೆ ಬಿಜೆಪಿ ಕಾರ್ಯಕಾರಿಣಿಯನ್ನು ಆನಂತರ ಮುಂದಕ್ಕೆ ಹಾಕಲಾಗಿತ್ತು.
Sharpening its attack on the Bommai government in Karnataka, the state Congress unit put up posters of the Chief Minister along with QR codes across Bengaluru on Wednesday. The ‘PayCM’ posters have an image of Chief Minister Basavraj Bommai and also a QR code attached on it, that will reportedly take users to www.40percentsarkara.com.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 08:26 pm
Mangalore Correspondent
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm