www.40percentsarkara.com.
">ಬ್ರೇಕಿಂಗ್ ನ್ಯೂಸ್
21-09-22 04:33 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ರಾಜ್ಯ ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಸದನದಲ್ಲಿ ಹೋರಾಟ ನಡೆಸುತ್ತಿರುವಂತೆಯೇ ಕಾಂಗ್ರೆಸ್ ಬೆಂಗಳೂರು ನಗರದಲ್ಲಿ ನಲ್ವತ್ತು ಪರ್ಸೆಂಟ್ ಹೆಸರಲ್ಲಿ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿಯನ್ನು ಅಣಕಿಸುವ ಕೆಲಸ ಮಾಡಿದೆ. ಬೆಂಗಳೂರು ನಗರದಾದ್ಯಂತ ಬಸ್ ನಿಲ್ದಾಣ, ಸಾರ್ವಜನಿಕ ಪ್ರದೇಶದಲ್ಲಿ ಪೇ ಸಿಎಂ ಹೆಸರಲ್ಲಿ ಬೊಮ್ಮಾಯಿ ಅವರ ನೆಗೆಟಿವ್ ಚಿತ್ರ ಬಳಸಿ ಪೋಸ್ಟರ್ ಚಿತ್ರಿಸಿದೆ.
ಪೇಟಿಎಂ ರೀತಿಯಲ್ಲೇ ಕ್ಯುಆರ್ ಕೋಡನ್ನು ಪೋಸ್ಟರಲ್ಲಿ ನೀಡಲಾಗಿದ್ದು, ಅದನ್ನು ಮೊಬೈಲಿನಲ್ಲಿ ಸ್ಕ್ಯಾನ್ ಮಾಡಿದರೆ ನೇರವಾಗಿ ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ 40 ಪರ್ಸೆಂಟ್ ಕಮಿಷನ್ ಬಗ್ಗೆ ದೂರು ನೀಡಲು ವೆಬ್ ಸೈಟ್ ಆರಂಭಿಸಿತ್ತು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಕಮಿಷನ್ ದಂಧೆ ಯಾವ ರೀತಿ ಇದೆ, ಅದರಿಂದ ಜನಸಾಮಾನ್ಯರು ಯಾವ ರೀತಿ ತೊಂದರೆ ಎದುರಿಸುತ್ತಿದ್ದಾರೆ ಎಂಬ ಬಗ್ಗೆ ದೂರು ನೀಡಲು ಈ ವೆಬ್ ಸೈಟ್ ಆರಂಭಿಸಿತ್ತು. ಆದರೆ ಆ ವೆಬ್ ಸೈಟ್ ಅಷ್ಟು ಪ್ರಚಾರ ಗಿಟ್ಟಿಸಿಕೊಂಡಿರಲಿಲ್ಲ.



ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಫೋಟೋ ಇರುವಂತೆ ಪೇಟಿಎಂ ಅಪ್ಲಿಕೇಶನ್ ಮಾದರಿಯಲ್ಲಿ ಕ್ಯುಆರ್ ಕೋಡ್ ಚಿತ್ರಿಸಿ ಪೋಸ್ಟರ್ ಮಾಡಲಾಗಿದ್ದು, ಅದನ್ನು ಸಾರ್ವಜನಿಕ ಜಾಗದಲ್ಲಿ ರಾತ್ರೋರಾತ್ರಿ ಅಂಟಿಸಲಾಗಿದೆ. ಬೆಂಗಳೂರು ನಗರದಾದ್ಯಂತ PAY CM ಎನ್ನುವ ಹೆಸರಿನ ಪೋಸ್ಟರನ್ನು ಬಸ್ ನಿಲ್ದಾಣ, ರಸ್ತೆ ಬದಿಯ ಗೋಡೆಗಳಲ್ಲಿ ಅಂಟಿಸಲಾಗಿದೆ. ಆಮೂಲಕ ನಲ್ವತ್ತು ಪರ್ಸೆಂಟ್ ಸರಕಾರ ಎನ್ನುವ ಬಗ್ಗೆ ಬಿಜೆಪಿ ಸರಕಾರವನ್ನು ತೀವ್ರವಾಗಿ ಅಣಕಿಸಲಾಗಿದೆ. ಈ ರೀತಿಯ ಪೋಸ್ಟರ್ ನಿಂದ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.




ಕಳೆದ ವಾರ ಹೈದರಾಬಾದ್ ನಲ್ಲಿ ಇದೇ ರೀತಿ 40 ಪರ್ಸೆಂಟ್ ಸಿಎಂ ಎನ್ನುವ ದೊಡ್ಡ ಪೋಸ್ಟರನ್ನು ಹಾಕಲಾಗಿತ್ತು. ಅಲ್ಲಿ ಆಡಳಿತ ನಡೆಸುತ್ತಿರುವ ಟಿಆರ್ ಎಸ್ ಪಕ್ಷದ ಕಾರ್ಯಕರ್ತರು ಆ ರೀತಿ ಪೋಸ್ಟರ್ ಹಾಕಿದ್ದರು. ಹೈದರಾಬಾದಲ್ಲಿ ಬಿಜೆಪಿ ಕಾರ್ಯಕಾರಿಣಿ ಇದ್ದುದರಿಂದ ಮತ್ತು ಅದಕ್ಕೆ ಕರ್ನಾಟಕದ ಮುಖ್ಯಮಂತ್ರಿ ತೆರಳುತ್ತಾರೆ ಎಂಬ ಹಿನ್ನೆಲೆಯಲ್ಲಿ ಅಣಕಿಸುವ ಪೋಸ್ಟರ್ ಹಾಕಲಾಗಿತ್ತು. ಆದರೆ ಬಿಜೆಪಿ ಕಾರ್ಯಕಾರಿಣಿಯನ್ನು ಆನಂತರ ಮುಂದಕ್ಕೆ ಹಾಕಲಾಗಿತ್ತು.
Sharpening its attack on the Bommai government in Karnataka, the state Congress unit put up posters of the Chief Minister along with QR codes across Bengaluru on Wednesday. The ‘PayCM’ posters have an image of Chief Minister Basavraj Bommai and also a QR code attached on it, that will reportedly take users to www.40percentsarkara.com.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm