www.40percentsarkara.com.
">ಬ್ರೇಕಿಂಗ್ ನ್ಯೂಸ್
21-09-22 04:33 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ರಾಜ್ಯ ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಸದನದಲ್ಲಿ ಹೋರಾಟ ನಡೆಸುತ್ತಿರುವಂತೆಯೇ ಕಾಂಗ್ರೆಸ್ ಬೆಂಗಳೂರು ನಗರದಲ್ಲಿ ನಲ್ವತ್ತು ಪರ್ಸೆಂಟ್ ಹೆಸರಲ್ಲಿ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿಯನ್ನು ಅಣಕಿಸುವ ಕೆಲಸ ಮಾಡಿದೆ. ಬೆಂಗಳೂರು ನಗರದಾದ್ಯಂತ ಬಸ್ ನಿಲ್ದಾಣ, ಸಾರ್ವಜನಿಕ ಪ್ರದೇಶದಲ್ಲಿ ಪೇ ಸಿಎಂ ಹೆಸರಲ್ಲಿ ಬೊಮ್ಮಾಯಿ ಅವರ ನೆಗೆಟಿವ್ ಚಿತ್ರ ಬಳಸಿ ಪೋಸ್ಟರ್ ಚಿತ್ರಿಸಿದೆ.
ಪೇಟಿಎಂ ರೀತಿಯಲ್ಲೇ ಕ್ಯುಆರ್ ಕೋಡನ್ನು ಪೋಸ್ಟರಲ್ಲಿ ನೀಡಲಾಗಿದ್ದು, ಅದನ್ನು ಮೊಬೈಲಿನಲ್ಲಿ ಸ್ಕ್ಯಾನ್ ಮಾಡಿದರೆ ನೇರವಾಗಿ ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ 40 ಪರ್ಸೆಂಟ್ ಕಮಿಷನ್ ಬಗ್ಗೆ ದೂರು ನೀಡಲು ವೆಬ್ ಸೈಟ್ ಆರಂಭಿಸಿತ್ತು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ ಕಮಿಷನ್ ದಂಧೆ ಯಾವ ರೀತಿ ಇದೆ, ಅದರಿಂದ ಜನಸಾಮಾನ್ಯರು ಯಾವ ರೀತಿ ತೊಂದರೆ ಎದುರಿಸುತ್ತಿದ್ದಾರೆ ಎಂಬ ಬಗ್ಗೆ ದೂರು ನೀಡಲು ಈ ವೆಬ್ ಸೈಟ್ ಆರಂಭಿಸಿತ್ತು. ಆದರೆ ಆ ವೆಬ್ ಸೈಟ್ ಅಷ್ಟು ಪ್ರಚಾರ ಗಿಟ್ಟಿಸಿಕೊಂಡಿರಲಿಲ್ಲ.
ಇದೀಗ ಮುಖ್ಯಮಂತ್ರಿ ಬೊಮ್ಮಾಯಿ ಫೋಟೋ ಇರುವಂತೆ ಪೇಟಿಎಂ ಅಪ್ಲಿಕೇಶನ್ ಮಾದರಿಯಲ್ಲಿ ಕ್ಯುಆರ್ ಕೋಡ್ ಚಿತ್ರಿಸಿ ಪೋಸ್ಟರ್ ಮಾಡಲಾಗಿದ್ದು, ಅದನ್ನು ಸಾರ್ವಜನಿಕ ಜಾಗದಲ್ಲಿ ರಾತ್ರೋರಾತ್ರಿ ಅಂಟಿಸಲಾಗಿದೆ. ಬೆಂಗಳೂರು ನಗರದಾದ್ಯಂತ PAY CM ಎನ್ನುವ ಹೆಸರಿನ ಪೋಸ್ಟರನ್ನು ಬಸ್ ನಿಲ್ದಾಣ, ರಸ್ತೆ ಬದಿಯ ಗೋಡೆಗಳಲ್ಲಿ ಅಂಟಿಸಲಾಗಿದೆ. ಆಮೂಲಕ ನಲ್ವತ್ತು ಪರ್ಸೆಂಟ್ ಸರಕಾರ ಎನ್ನುವ ಬಗ್ಗೆ ಬಿಜೆಪಿ ಸರಕಾರವನ್ನು ತೀವ್ರವಾಗಿ ಅಣಕಿಸಲಾಗಿದೆ. ಈ ರೀತಿಯ ಪೋಸ್ಟರ್ ನಿಂದ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.
ಕಳೆದ ವಾರ ಹೈದರಾಬಾದ್ ನಲ್ಲಿ ಇದೇ ರೀತಿ 40 ಪರ್ಸೆಂಟ್ ಸಿಎಂ ಎನ್ನುವ ದೊಡ್ಡ ಪೋಸ್ಟರನ್ನು ಹಾಕಲಾಗಿತ್ತು. ಅಲ್ಲಿ ಆಡಳಿತ ನಡೆಸುತ್ತಿರುವ ಟಿಆರ್ ಎಸ್ ಪಕ್ಷದ ಕಾರ್ಯಕರ್ತರು ಆ ರೀತಿ ಪೋಸ್ಟರ್ ಹಾಕಿದ್ದರು. ಹೈದರಾಬಾದಲ್ಲಿ ಬಿಜೆಪಿ ಕಾರ್ಯಕಾರಿಣಿ ಇದ್ದುದರಿಂದ ಮತ್ತು ಅದಕ್ಕೆ ಕರ್ನಾಟಕದ ಮುಖ್ಯಮಂತ್ರಿ ತೆರಳುತ್ತಾರೆ ಎಂಬ ಹಿನ್ನೆಲೆಯಲ್ಲಿ ಅಣಕಿಸುವ ಪೋಸ್ಟರ್ ಹಾಕಲಾಗಿತ್ತು. ಆದರೆ ಬಿಜೆಪಿ ಕಾರ್ಯಕಾರಿಣಿಯನ್ನು ಆನಂತರ ಮುಂದಕ್ಕೆ ಹಾಕಲಾಗಿತ್ತು.
Sharpening its attack on the Bommai government in Karnataka, the state Congress unit put up posters of the Chief Minister along with QR codes across Bengaluru on Wednesday. The ‘PayCM’ posters have an image of Chief Minister Basavraj Bommai and also a QR code attached on it, that will reportedly take users to www.40percentsarkara.com.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm