ಬ್ರೇಕಿಂಗ್ ನ್ಯೂಸ್
21-09-22 08:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21: ಶಿವಮೊಗ್ಗದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತ ಉಗ್ರರು ದೇಶಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ ತುಂಗಭದ್ರಾ ನದಿ ತಟದ ನಿರ್ಜನ ಪ್ರದೇಶದಲ್ಲಿ ಬಾಂಬ್ ತಯಾರಿಸಿ ಪ್ರಯೋಗ ನಡೆಸುತ್ತಿದ್ದರು ಎನ್ನುವ ಮಾಹಿತಿ ತನಿಖೆಯಲ್ಲಿ ಕಂಡುಬಂದಿದ್ದು, ಬಂಧಿತರನ್ನು ಅಲ್ಲಿನ ವಿವಿಧ ಪ್ರದೇಶಗಳಿಗೆ ಕರೆದೊಯ್ದು ಮಹಜರು ನಡೆಸಿದ್ದಾರೆ.
ಸೈಯದ್ ಯಾಸಿನ್ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ತಾಂತ್ರಿಕ ಪರಿಣತಿ ಪಡೆದಿದ್ದರೆ, ಮಾಝ್ ಮುನೀರ್ ಅಹ್ಮದ್ ಎಂಟೆಕ್ ಪದವೀಧರನಾಗಿದ್ದು ಆಧುನಿಕ ರೀತಿಯ ಸ್ಫೋಟಕಗಳನ್ನು ತಯಾರಿಸುವ ಬಗ್ಗೆ ಪ್ರಯೋಗ ನಡೆಸುತ್ತಿದ್ದರು. ಇವರಿಬ್ಬರು ಕೂಡ ತುಂಗಭದ್ರಾ ದಡ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಬಾಂಬ್ ತಯಾರಿಗಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ, ಈ ಬಗ್ಗೆ ಬೇರೆಯವರಿಗೂ ತರಬೇತಿ ನೀಡುತ್ತಿದ್ದರು. ತುಂಗಭದ್ರಾ ನದಿಯ ಹಳೇ ಗುರುಪುರ ವಲಯದ 17 ಕಡೆಗಳಲ್ಲಿ ಇಂಥ ಶಿಬಿರಗಳನ್ನು ನಡೆಸುತ್ತಿದ್ದರು. ಮತ್ತು ಅಲ್ಲಿ ವಿವಿಧ ಮಾದರಿಯ ಸ್ಫೋಟಕಗಳನ್ನು ಅಡಗಿಸಿಟ್ಟಿರುವುದು ಮಹಜರು ವೇಳೆ ಪತ್ತೆಯಾಗಿದೆ ಎನ್ನುವ ಮಾಹಿತಿಗಳಿವೆ. ದಾವಣಗೆರೆ ಮತ್ತು ಬೆಂಗಳೂರಿನಿಂದ ಬಂದಿದ್ದ ಎಫ್ಎಸ್ಎಲ್ ತಜ್ಞರ ತಂಡ ಚನ್ನಗಿರಿ ರಸ್ತೆಯ ಗುರುಪುರ- ಪುರಲೆ ಪ್ರದೇಶದಲ್ಲಿ ಸ್ಫೋಟಕಗಳನ್ನು ಅಡಗಿಸಿದ್ದಾರೆಂಬ ಶಂಕೆ ಮೇರೆಗೆ ಸ್ಥಳ ಮಹಜರು ನಡೆಸಿದ್ದಾರೆ.


ಆರೋಪಿಗಳು ತಮ್ಮೊಳಗೆ ಸಂವಹನ ನಡೆಸುವುದಕ್ಕೆ Wire App ಎನ್ನುವ ಅಪ್ಲಿಕೇಶನ್ ಬಳಸುತ್ತಿದ್ದರು. ಇದರಲ್ಲಿ ನೂರಕ್ಕೂ ಹೆಚ್ಚು ಮಂದಿ ತಂಡವಾಗಿ ಇದೇ ಏಪ್ ಬಳಕೆ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣದಲ್ಲಿ ಬಂಧನವಾಗಿದ್ದ ಜಬೀವುಲ್ಲಾ ನೀಡಿದ್ದ ಮಾಹಿತಿ ಅನುಸರಿಸಿ ಪೊಲೀಸರು ತನಿಖೆ ನಡೆಸಿದಾಗ ಉಗ್ರರ ಜಾಲ ಬಯಲಾಗಿತ್ತು. ಇವರೆಲ್ಲ ಐಸಿಸ್ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ.
ಐಸಿಸ್ ಉಗ್ರರ ಲಿಂಕ್ ; ಶಿವಮೊಗ್ಗ ಪೊಲೀಸರಿಂದ ಮೂವರ ಬಂಧನ, ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ನಂಟು !
Shivamogga terror suspects, explosives were made near Tungabhadra River side. Shivamogga police are investigating the activities of two persons arrested on the charge of having links with Islamic State (ISIS), which is a banned terror organisation. Police suspect the accused were in possession of explosives and intended to damage public property.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm