ಬ್ರೇಕಿಂಗ್ ನ್ಯೂಸ್
22-09-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಸೆ.22 : ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ವಿವಿಧ ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ ನಡೆದಿದ್ದು ಪಿಎಫ್ಐ ಮುಖಂಡರ ನಿವಾಸಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಪಾದರಾಯನಪುರ, ರಿಚ್ಮಂಡ್ ಟೌನ್, ಟ್ಯಾನರಿ ರೋಡ್ ಸೇರಿದಂತೆ 4 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಪಾದರಾಯನಪುರದಲ್ಲಿ ಪಿಎಫ್ಐ ಲೀಡರ್ ಅಫ್ಸರ್ ಪಾಷಾ ಮನೆ, ಟ್ಯಾನರಿ ರಸ್ತೆಯಲ್ಲಿ ನಾಸಿರ್ ಪಾಷಾ ಮನೆ ಮೇಲೆ ರೇಡ್ ಆಗಿದೆ. ರಿಚ್ಮಂಡ್ ಟೌನಲ್ಲಿ ಮೊಹಮ್ಮದ್ ಸಾಕಿದ್ ಫ್ಲ್ಯಾಟ್ ಮೇಲೂ NIA ದಾಳಿಯಾಗಿದೆ. ಮೊಹಮ್ಮದ್ ಸಾಕಿಬ್, ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಅಪಾರ್ಟ್ಮೆಂಟ್ ಮನೆಗೆ ಬಿಗಿ ಭದ್ರತೆ ನಿಯೋಜಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೇರಳ, ತಮಿಳುನಾಡಿನಲ್ಲೂ ದಾಳಿ
ಇದಲ್ಲದೆ, ಏಕಕಾಲದಲ್ಲಿ ದೇಶಾದ್ಯಂತ 10 ರಾಜ್ಯಗಳಲ್ಲಿ NIA ಹಾಗೂ ಇಡಿ ಏಕಕಾಲದಲ್ಲಿ ದಾಳಿ ನಡೆಸಿದ್ದು 100ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿಗಳಿವೆ. NIA, ಇಡಿ ಹಾಗೂ ಸ್ಥಳೀಯ ಪೊಲೀಸರು ಕೇರಳ, ತಮಿಳುನಾಡಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶದಲ್ಲೂ ದಾಳಿಯಾಗಿದೆ. ಒಟ್ಟು 200ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಕೊಪ್ಪಳದಲ್ಲೂ ಎನ್ಐಎ ದಾಳಿ
ಕೊಪ್ಪಳ ಪಿಎಫ್ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅವರ ಗಂಗಾವತಿ ನಗರದ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಫಯಾಜ್ ಅವರನ್ನು ವಶಕ್ಕೆ ಪಡೆದಿದೆ. ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ.
The National Investigation Agency (NIA) and the Enforcement Directorate (ED) Thursday conducted searches across 10 states in connection with anti-terror activities. Sources told the agencies were acting on a suspicion that the people being probed were allegedly involved in organising terror camps and encouraging youth to join terror activities. As part of the searches, as many as 100 people linked to the Popular Front of India (PFI) were arrested.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm