ಬ್ರೇಕಿಂಗ್ ನ್ಯೂಸ್
23-09-22 08:07 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ಸಮುದಾಯಗಳ ನಡುವೆ ದ್ವೇಷ ಬಿತ್ತುವುದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದು, ಧರ್ಮಗಳ ಆಧಾರದಲ್ಲಿ ಗುಂಪುಗಳನ್ನು ಎತ್ತಿ ಕಟ್ಟಿ ಗಲಭೆ ಎಬ್ಬಿಸುವುದು ಇತ್ಯಾದಿ ವಿಚಾರಗಳ ಬಗ್ಗೆ ಪಿಎಫ್ಐ ನಾಯಕರ ವಿರುದ್ಧ ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸೆ.21ರಂದು ಏಂಟಿ ಟೆರರಿಸ್ಟ್ ಸ್ಕ್ವಾಡ್ ತಂಡದ ಅಧಿಕಾರಿಯೊಬ್ಬರು ಕೆಜೆ ಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ 19 ಮಂದಿ ಪಿಎಫ್ಐ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆ ಪೈಕಿ 15 ಮಂದಿಯನ್ನು ಗುರುವಾರ ಎನ್ಐಎ ಅಧಿಕಾರಿಗಳ ಜೊತೆಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ.

ಎಫ್ಐಆರ್ ನಲ್ಲಿ ಬೆಂಗಳೂರಿನ ನಾಸಿರ್ ಪಾಷಾ, ಮನ್ಸೂರ್ ಅಹ್ಮದ್, ಕಲಬುರ್ಗಿಯ ಶೇಖ್ ಇಜಾಜ್ ಆಲಿ, ಮೈಸೂರಿನ ಮಹಮ್ಮದ್ ಕಲೀಮುಲ್ಲಾ, ಮಂಗಳೂರಿನ ಮಹಮ್ಮದ್ ಅಶ್ರಫ್ ಅಂಕಜಾಲು, ಮೊಹಮ್ಮದ್ ಶರೀಫ್ ಬಜ್ಪೆ, ಅಬ್ದುಲ್ ಖಾದರ್ ಪುತ್ತೂರು, ಬಂಟ್ವಾಳ ಕರಿಂಗಾನದ ಮಹಮ್ಮದ್ ತಪ್ಸೀರ್, ಮೊಹಿಯುದ್ದೀನ್ ಹಳೆಯಂಗಡಿ, ನವಾಜ್ ಕಾವೂರು, ಮೊಹಮ್ಮದ್ ಅಶ್ರಫ್ ಜೋಕಟ್ಟೆ, ಅಬ್ದುಲ್ ರಜಾಕ್ ಕೆಮ್ಮಾರ, ಅಯೂಬ್ ಕೆ. ಅಗ್ನಾಡಿ, ಶಿವಮೊಗ್ಗ ಜಿಲ್ಲೆಯ ಶಾಹೀದ್ ಖಾನ್, ದಾವಣಗೆರೆ ಜಿಲ್ಲೆ ಅಬು ತಾಹಿರ್, ಇಮಾಮುದ್ದೀನ್, ಉತ್ತರ ಕನ್ನಡ ಶಿರಸಿಯ ಅಬ್ದುಲ್ ಅಜೀಜ್ ಅಬ್ದುಲ್, ಮೌಸೀನ್ ಅಬ್ದುಲ್ ಶುಕೂರ್, ಕೊಪ್ಪಳ ಜಿಲ್ಲೆಯ ಮೊಹಮ್ಮದ್ ಫಯಾಜ್ ಎಂಬ 19 ಮಂದಿಯನ್ನು ಆರೋಪಿಗಳೆಂದು ತೋರಿಸಲಾಗಿದೆ.
15 ಮಂದಿಯನ್ನು ಬಂಧಿಸಿದ್ದು ಮೊಹಮ್ಮದ್ ಶರೀಫ್, ಮೊಹಮ್ಮದ್ ಅಶ್ರಫ್, ಅಯೂಬ್ ಅಗ್ನಾಡಿ, ಅಬ್ದುಲ್ ರಜಾಕ್ ಎಂಬವರು ತಲೆಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಬೆಂಗಳೂರಿನ ಕೆಜಿ ಹಳ್ಳಿ ಉಪವಿಭಾಗದ ಕಾಡುಗೊಂಡನ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, 153 ಎ, 121 ಎ, 120 ಬಿ, 121 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಧರ್ಮದ ಹೆಸರಲ್ಲಿ ಸಮುದಾಯಗಳ ನಡುವೆ ವಿಷ ಬೀಜ ಬಿತ್ತುವುದು, ಜನಸಾಮಾನ್ಯರನ್ನು ಎತ್ತಿ ಕಟ್ಟುವುದು, ಕೋಮು ಗಲಭೆಗೆ ಕಾರಣವಾಗುವುದು, ಸರಕಾರದ ಬಗ್ಗೆ ತಪ್ಪು ಮಾಹಿತಿಗಳನ್ನು ನೀಡಿ ಯುವಕರನ್ನು ಪ್ರಚೋದಿಸುವುದು, ಪಿಎಫ್ಐ ಕಾರ್ಯಕರ್ತರಿಗೆ ಶಸ್ತ್ರ ಸಹಿತ ತರಬೇತಿ ನೀಡುವುದು, ಯುವಕರಲ್ಲಿ ತೀವ್ರವಾದದ ಬಗ್ಗೆ ಆಸಕ್ತಿ ಮೂಡಿಸುವುದು, ನಿರ್ದಿಷ್ಟ ಸಮುದಾಯದ ವ್ಯಕ್ತಿಗಳ ಮೇಲೆ ಆಕ್ರಮಣ ನಡೆಸುವುದಕ್ಕೆ ಪ್ರೇರಣೆ ನೀಡುವುದು, ಸಮಾಜದಲ್ಲಿ ಭೀತಿಯ ವಾತಾವರಣ ಮೂಡಿಸುವುದು, ದೇಶದಲ್ಲಿ ಅಭದ್ರತೆ ಮೂಡಿಸಿ, ಸರಕಾರಕ್ಕೆ ಸವಾಲಾಗುವ ಸ್ಥಿತಿ ತಂದೊಡ್ಡುವುದು, ಸರಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವುದು ಇತ್ಯಾದಿ ಗುರುತರ ಆರೋಪಗಳನ್ನು ಪಿಎಫ್ಐ ನಾಯಕರ ಮೇಲೆ ಹೊರಿಸಲಾಗಿದ್ದು, ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಡಿ ಎಫ್ಐಆರ್ ದಾಖಲಿಸುತ್ತಿರುವುದಾಗಿ ಉಲ್ಲೇಖ ಮಾಡಲಾಗಿದೆ.
In the wake of nationwide raids by the National Investigation Agency (NIA) against the Popular Front of India (PFI) and its office bearers, the Bengaluru police Thursday registered separate cases of allegedly attempting to wage war and provocation at religious places, and arrested 14 men, including two from Bengaluru, officials said. And the other four from Mangalore are said to be missing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm