ಪೇಸಿಎಂ ಅಭಿಯಾನ ; ಕಾಂಗ್ರೆಸ್​ನವರದು ಡರ್ಟಿ ಪಾಲಿಟಿಕ್ಸ್ , ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ! 

24-09-22 03:12 pm       HK News Desk   ಕರ್ನಾಟಕ

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ.

ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್‌ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

QR code an evil design': Bommai on Karnataka Congress 'PayCM' campaign |  Bengaluru - Hindustan Times

Siddaramaiah: War of words between Karnataka Congress chief, Siddaramaiah  camps continues over CM candidate - The Economic Times

ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

Congress paycm campaign CM Bommai slams leaders of Congress says they are into dirty politics in Chitradurga.