ಬ್ರೇಕಿಂಗ್ ನ್ಯೂಸ್
26-09-22 11:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.26 : ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಕಚೇರಿಗೆ ತಲುಪಿಸುತ್ತೇನೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ ಇದಕ್ಕೇನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಕಳೆದ ಚುನಾವಣೆ ವೇಳೆ ಹತ್ತು ಶೇ., 20 ಶೇ. ಕಮಿಷನ್ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಪಕ್ಷ ಅಧಿಕಾರದಲ್ಲಿದ್ದು ಕರ್ನಾಟಕದಲ್ಲಿ ನಲ್ವತ್ತು ಪರ್ಸೆಂಟ್ ಜನರ ಬಾಯಲ್ಲಿ ಹರಿದಾಡುತ್ತಿದೆ. ಈಗ ಯಾಕೆ ಮೋದಿ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಕೇಳಿದರು.

ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ದಾಖಲೆಗಳಿದ್ದು ಕ್ರಮಕ್ಕಾಗಿ ಪ್ರಧಾನಿಗೆ ಬರೆಯುತ್ತೇನೆ. ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ಧೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ ಮುಖ್ಯಮಂತ್ರಿಗಳಿಗೆ ತನಿಖೆ ನಡೆಸುವ ಧಮ್ ಇದೆಯೇ ಎಂದು ಕುಮಾರಸ್ವಾಮಿ ಚಾಟಿ ಬೀಸಿದರು.
ಬಿಜೆಪಿ ಭಂಡತನ ತೋರುತ್ತಿದೆ. ದಾಖಲೆಗಳನ್ನು ಮುಂದಿಟ್ಟು ಕೇಳಿದರೂ ವಿತಂಡ ವಾದ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಸಮಸ್ಯೆಗಳ ಕಡೆ ಗಮನ ಕೊಡುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ಸ್ಪರ್ಧೆ ಮಾಡುತ್ತಿದೆ. ಪರಸ್ಪರ ಕೆಸರೆರಚಾಟ ಮಾಡುವಲ್ಲಿ ತೊಡಗಿವೆ ಎಂದವರು ದೂರಿದರು.

ಪೇ ಸಿಎಂ ಎನ್ನುವ ಪ್ರಚಾರವನ್ನು ಒಂದು ಪಕ್ಷ ಶುರು ಮಾಡಿದೆ, ಅದಕ್ಕೆ ಪ್ರತಿಯಾಗಿ ಇನ್ನೊಂದು ಪಕ್ಷ ಮತ್ತೊಂದು ಕೌಂಟರ್ ಮಾಡಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತೀವಿ ಅಂತ ಹೊರಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಹಗರಣಗಳು ನಡೆಯುತ್ತಿವೆ. ಮತ್ತೆ ಅಧಿಕಾರ ಕೊಟ್ಟರೆ ಎಲ್ಲವನ್ನೂ ಸರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಹಗರಣಗಳ ದಾಖಲೆ ಕೊಟ್ಟರೂ ಕಳಂಕಿತ ಸಚಿವರನ್ನು ರಕ್ಷಣೆ ಮಾಡುವುದಾ? ಎಂದು ಎಚ್ಡಿಕೆ ಪ್ರಶ್ನೆ ಮಾಡಿದರು.
HDK slams BJP party on BMS Trust Scam, says let's see what does PM Modi does. JD(S) floor leader in the State Assembly and former chief minister H D Kumaraswamy has demanded the resignation of Higher Education Minister Dr C N Ashwath Narayan over the alleged irregularities and hasty manner in which the BMS Education Trust was favoured.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm