ಪಿಎಫ್ಐ, ಎಸ್ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ; ನಳಿನ್ ಕುಮಾರ್ 

27-09-22 02:30 pm       HK News Desk   ಕರ್ನಾಟಕ

ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ‌ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.‌

ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ‌ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.‌

ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.‌

Siddaramaiah at 'Indo-China Friendship' event? 'No, I declined,' he says |  Bengaluru - Hindustan Times

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ‌ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.

Siddaramaiah sole responsible for the growth of SDPI and PFI in state slams Nalin Kumar Kateel at Vijapura.