ಬ್ರೇಕಿಂಗ್ ನ್ಯೂಸ್
27-09-22 05:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27 : ರಾಜ್ಯ ಸರ್ಕಾರದ ವಿರುದ್ಧ 'ಪೇಸಿಎಂ' ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಅಭಿಯಾನ ನಡೆಸುತ್ತಿದ್ದರೆ, ಅತ್ತ ಬಿಜೆಪಿಯಿಂದ ಸೋನಿಯಾ ಗಾಂಧಿ ಫೋಟೋ ಹಾಕಿ 'ಪೇ ಟು ಮೇಡಂ' ಪೋಸ್ಟರ್ ಪರಸ್ಪರ ಸಮರ ಆರಂಭಿಸಿವೆ. ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಕೌಂಟರ್ ಕೊಡಲು ರೆಡಿಯಾಗಿರುವ ಜೆಡಿಎಸ್, ಹೊಸ ಮಾದರಿಯ ಕ್ಯಾಂಪೇನ್ ಶುರು ಮಾಡಲು ಸಜ್ಜಾಗಿದೆ.
ಜೆಡಿಎಸ್ನಿಂದ 'ಪಬ್ಲಿಕ್' ಪೋಸ್ಟರ್ ಹೆಸರಲ್ಲಿ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಕ್ಯೂ ಆರ್ ಕೋಡ್ ಮಾದರಿಯಲ್ಲಿ ಪಬ್ಲಿಕ್ ಪೋಸ್ಟರ್ ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತ ಅವಧಿಯ ಸಾಧನೆಗಳು, ಮುಂಬರುವ ಚುನಾವಣಾ ಯೋಜನೆಗಳ ಮಾಹಿತಿ ಸಿಗಲಿದೆ. ರಾಷ್ಟ್ರೀಯ ಪಕ್ಷಗಳ ಹಗರಣಗಳ ಬಗ್ಗೆಯೂ ಇದರಲ್ಲಿ ಮಾಹಿತಿ ಇರಲಿದೆ. ಸೆ.30ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತ ಪೋಸ್ಟರ್ನ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಿದ್ದಾರೆ. ರಾಯಚೂರಿನಿಂದ ಈ ಹೊಸ ಅಭಿಯಾನ ಆರಂಭವಾಗಲಿದೆ.
ಕಳೆದ ವಾರ ರಾತ್ರೋರಾತ್ರಿ ಬೆಂಗಳೂರಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಫೋಟೋ ಹಾಕಿ 'ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಭ್ರಷ್ಟ ಜೋಡಿಯನ್ನ ರಾಜ್ಯದಿಂದ ಕಿತ್ತೆಸೆಯಲು ಇದನ್ನ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಕಡೆಯಿಂದ ಪೋಸ್ಟ್ ಹಾಕಲಾಗಿತ್ತು. 'ಸ್ಕ್ಯಾಮ್ ರಾಮಯ್ಯ' ಹೆಸರಿನಲ್ಲಿ ಪುಸ್ತಕವನ್ನೂ ಬಿಡುಗಡೆ ಮಾಡಿ ಆಕ್ರೋಶ ಹೊರ ಹಾಕಿತ್ತು. ಅಲ್ಲದೆ, ಸೋನಿಯಾ ಗಾಂಧಿ ಫೋಟೋ ಸಹಿತ 'ಪೇ ಟು ಮೇಡಂ' ಪೋಸ್ಟರನ್ನೂ ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಧಿವೇಶನದಲ್ಲಿ 40% ಕಮಿಷನ್ ಎಂದು ಬರೆದಿದ್ದ ಪ್ಲೆಕಾರ್ಡ್ ಹಿಡಿದು ಧರಣಿ ನಡೆಸಿತ್ತು. ಈ ನಡುವೆ ರೈತ ಸಂಘದ ಸದಸ್ಯರು, 'PAY FARMER' ಎಂಬ ಅಭಿಯಾನ ಶುರು ಮಾಡಿದ್ದು ಹೊಸ ವಿದ್ಯಮಾನ ಆಗಿತ್ತು. ಇದರ ನಡುವೆ ಜೆಡಿಎಸ್, ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್ ಕೊಡಲು ಹೊಸ ಪೋಸ್ಟರ್ ಗೆ ಸಿದ್ಧತೆ ನಡೆಸಿದೆ.
Congress, BJP poster campaign, JDS set to give counter to both the parties
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm