ಬ್ರೇಕಿಂಗ್ ನ್ಯೂಸ್
27-09-22 05:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27 : ರಾಜ್ಯ ಸರ್ಕಾರದ ವಿರುದ್ಧ 'ಪೇಸಿಎಂ' ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಅಭಿಯಾನ ನಡೆಸುತ್ತಿದ್ದರೆ, ಅತ್ತ ಬಿಜೆಪಿಯಿಂದ ಸೋನಿಯಾ ಗಾಂಧಿ ಫೋಟೋ ಹಾಕಿ 'ಪೇ ಟು ಮೇಡಂ' ಪೋಸ್ಟರ್ ಪರಸ್ಪರ ಸಮರ ಆರಂಭಿಸಿವೆ. ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಕೌಂಟರ್ ಕೊಡಲು ರೆಡಿಯಾಗಿರುವ ಜೆಡಿಎಸ್, ಹೊಸ ಮಾದರಿಯ ಕ್ಯಾಂಪೇನ್ ಶುರು ಮಾಡಲು ಸಜ್ಜಾಗಿದೆ.
ಜೆಡಿಎಸ್ನಿಂದ 'ಪಬ್ಲಿಕ್' ಪೋಸ್ಟರ್ ಹೆಸರಲ್ಲಿ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಕ್ಯೂ ಆರ್ ಕೋಡ್ ಮಾದರಿಯಲ್ಲಿ ಪಬ್ಲಿಕ್ ಪೋಸ್ಟರ್ ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತ ಅವಧಿಯ ಸಾಧನೆಗಳು, ಮುಂಬರುವ ಚುನಾವಣಾ ಯೋಜನೆಗಳ ಮಾಹಿತಿ ಸಿಗಲಿದೆ. ರಾಷ್ಟ್ರೀಯ ಪಕ್ಷಗಳ ಹಗರಣಗಳ ಬಗ್ಗೆಯೂ ಇದರಲ್ಲಿ ಮಾಹಿತಿ ಇರಲಿದೆ. ಸೆ.30ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತ ಪೋಸ್ಟರ್ನ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಿದ್ದಾರೆ. ರಾಯಚೂರಿನಿಂದ ಈ ಹೊಸ ಅಭಿಯಾನ ಆರಂಭವಾಗಲಿದೆ.
ಕಳೆದ ವಾರ ರಾತ್ರೋರಾತ್ರಿ ಬೆಂಗಳೂರಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಫೋಟೋ ಹಾಕಿ 'ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಭ್ರಷ್ಟ ಜೋಡಿಯನ್ನ ರಾಜ್ಯದಿಂದ ಕಿತ್ತೆಸೆಯಲು ಇದನ್ನ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಕಡೆಯಿಂದ ಪೋಸ್ಟ್ ಹಾಕಲಾಗಿತ್ತು. 'ಸ್ಕ್ಯಾಮ್ ರಾಮಯ್ಯ' ಹೆಸರಿನಲ್ಲಿ ಪುಸ್ತಕವನ್ನೂ ಬಿಡುಗಡೆ ಮಾಡಿ ಆಕ್ರೋಶ ಹೊರ ಹಾಕಿತ್ತು. ಅಲ್ಲದೆ, ಸೋನಿಯಾ ಗಾಂಧಿ ಫೋಟೋ ಸಹಿತ 'ಪೇ ಟು ಮೇಡಂ' ಪೋಸ್ಟರನ್ನೂ ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಧಿವೇಶನದಲ್ಲಿ 40% ಕಮಿಷನ್ ಎಂದು ಬರೆದಿದ್ದ ಪ್ಲೆಕಾರ್ಡ್ ಹಿಡಿದು ಧರಣಿ ನಡೆಸಿತ್ತು. ಈ ನಡುವೆ ರೈತ ಸಂಘದ ಸದಸ್ಯರು, 'PAY FARMER' ಎಂಬ ಅಭಿಯಾನ ಶುರು ಮಾಡಿದ್ದು ಹೊಸ ವಿದ್ಯಮಾನ ಆಗಿತ್ತು. ಇದರ ನಡುವೆ ಜೆಡಿಎಸ್, ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್ ಕೊಡಲು ಹೊಸ ಪೋಸ್ಟರ್ ಗೆ ಸಿದ್ಧತೆ ನಡೆಸಿದೆ.
Congress, BJP poster campaign, JDS set to give counter to both the parties
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm