ಬ್ರೇಕಿಂಗ್ ನ್ಯೂಸ್
27-09-22 05:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27 : ರಾಜ್ಯ ಸರ್ಕಾರದ ವಿರುದ್ಧ 'ಪೇಸಿಎಂ' ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಅಭಿಯಾನ ನಡೆಸುತ್ತಿದ್ದರೆ, ಅತ್ತ ಬಿಜೆಪಿಯಿಂದ ಸೋನಿಯಾ ಗಾಂಧಿ ಫೋಟೋ ಹಾಕಿ 'ಪೇ ಟು ಮೇಡಂ' ಪೋಸ್ಟರ್ ಪರಸ್ಪರ ಸಮರ ಆರಂಭಿಸಿವೆ. ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಕೌಂಟರ್ ಕೊಡಲು ರೆಡಿಯಾಗಿರುವ ಜೆಡಿಎಸ್, ಹೊಸ ಮಾದರಿಯ ಕ್ಯಾಂಪೇನ್ ಶುರು ಮಾಡಲು ಸಜ್ಜಾಗಿದೆ.
ಜೆಡಿಎಸ್ನಿಂದ 'ಪಬ್ಲಿಕ್' ಪೋಸ್ಟರ್ ಹೆಸರಲ್ಲಿ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಕ್ಯೂ ಆರ್ ಕೋಡ್ ಮಾದರಿಯಲ್ಲಿ ಪಬ್ಲಿಕ್ ಪೋಸ್ಟರ್ ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತ ಅವಧಿಯ ಸಾಧನೆಗಳು, ಮುಂಬರುವ ಚುನಾವಣಾ ಯೋಜನೆಗಳ ಮಾಹಿತಿ ಸಿಗಲಿದೆ. ರಾಷ್ಟ್ರೀಯ ಪಕ್ಷಗಳ ಹಗರಣಗಳ ಬಗ್ಗೆಯೂ ಇದರಲ್ಲಿ ಮಾಹಿತಿ ಇರಲಿದೆ. ಸೆ.30ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತ ಪೋಸ್ಟರ್ನ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಿದ್ದಾರೆ. ರಾಯಚೂರಿನಿಂದ ಈ ಹೊಸ ಅಭಿಯಾನ ಆರಂಭವಾಗಲಿದೆ.
ಕಳೆದ ವಾರ ರಾತ್ರೋರಾತ್ರಿ ಬೆಂಗಳೂರಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಫೋಟೋ ಹಾಕಿ 'ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಭ್ರಷ್ಟ ಜೋಡಿಯನ್ನ ರಾಜ್ಯದಿಂದ ಕಿತ್ತೆಸೆಯಲು ಇದನ್ನ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಕಡೆಯಿಂದ ಪೋಸ್ಟ್ ಹಾಕಲಾಗಿತ್ತು. 'ಸ್ಕ್ಯಾಮ್ ರಾಮಯ್ಯ' ಹೆಸರಿನಲ್ಲಿ ಪುಸ್ತಕವನ್ನೂ ಬಿಡುಗಡೆ ಮಾಡಿ ಆಕ್ರೋಶ ಹೊರ ಹಾಕಿತ್ತು. ಅಲ್ಲದೆ, ಸೋನಿಯಾ ಗಾಂಧಿ ಫೋಟೋ ಸಹಿತ 'ಪೇ ಟು ಮೇಡಂ' ಪೋಸ್ಟರನ್ನೂ ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಧಿವೇಶನದಲ್ಲಿ 40% ಕಮಿಷನ್ ಎಂದು ಬರೆದಿದ್ದ ಪ್ಲೆಕಾರ್ಡ್ ಹಿಡಿದು ಧರಣಿ ನಡೆಸಿತ್ತು. ಈ ನಡುವೆ ರೈತ ಸಂಘದ ಸದಸ್ಯರು, 'PAY FARMER' ಎಂಬ ಅಭಿಯಾನ ಶುರು ಮಾಡಿದ್ದು ಹೊಸ ವಿದ್ಯಮಾನ ಆಗಿತ್ತು. ಇದರ ನಡುವೆ ಜೆಡಿಎಸ್, ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್ ಕೊಡಲು ಹೊಸ ಪೋಸ್ಟರ್ ಗೆ ಸಿದ್ಧತೆ ನಡೆಸಿದೆ.
Congress, BJP poster campaign, JDS set to give counter to both the parties
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm