ಬ್ರೇಕಿಂಗ್ ನ್ಯೂಸ್
27-09-22 05:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27 : ರಾಜ್ಯ ಸರ್ಕಾರದ ವಿರುದ್ಧ 'ಪೇಸಿಎಂ' ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಅಭಿಯಾನ ನಡೆಸುತ್ತಿದ್ದರೆ, ಅತ್ತ ಬಿಜೆಪಿಯಿಂದ ಸೋನಿಯಾ ಗಾಂಧಿ ಫೋಟೋ ಹಾಕಿ 'ಪೇ ಟು ಮೇಡಂ' ಪೋಸ್ಟರ್ ಪರಸ್ಪರ ಸಮರ ಆರಂಭಿಸಿವೆ. ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಕೌಂಟರ್ ಕೊಡಲು ರೆಡಿಯಾಗಿರುವ ಜೆಡಿಎಸ್, ಹೊಸ ಮಾದರಿಯ ಕ್ಯಾಂಪೇನ್ ಶುರು ಮಾಡಲು ಸಜ್ಜಾಗಿದೆ.
ಜೆಡಿಎಸ್ನಿಂದ 'ಪಬ್ಲಿಕ್' ಪೋಸ್ಟರ್ ಹೆಸರಲ್ಲಿ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಕ್ಯೂ ಆರ್ ಕೋಡ್ ಮಾದರಿಯಲ್ಲಿ ಪಬ್ಲಿಕ್ ಪೋಸ್ಟರ್ ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತ ಅವಧಿಯ ಸಾಧನೆಗಳು, ಮುಂಬರುವ ಚುನಾವಣಾ ಯೋಜನೆಗಳ ಮಾಹಿತಿ ಸಿಗಲಿದೆ. ರಾಷ್ಟ್ರೀಯ ಪಕ್ಷಗಳ ಹಗರಣಗಳ ಬಗ್ಗೆಯೂ ಇದರಲ್ಲಿ ಮಾಹಿತಿ ಇರಲಿದೆ. ಸೆ.30ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಧಿಕೃತ ಪೋಸ್ಟರ್ನ ಕ್ಯೂ ಆರ್ ಕೋಡ್ ಬಿಡುಗಡೆ ಮಾಡಲಿದ್ದಾರೆ. ರಾಯಚೂರಿನಿಂದ ಈ ಹೊಸ ಅಭಿಯಾನ ಆರಂಭವಾಗಲಿದೆ.
ಕಳೆದ ವಾರ ರಾತ್ರೋರಾತ್ರಿ ಬೆಂಗಳೂರಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಭಿಯಾನ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಫೋಟೋ ಹಾಕಿ 'ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಭ್ರಷ್ಟ ಜೋಡಿಯನ್ನ ರಾಜ್ಯದಿಂದ ಕಿತ್ತೆಸೆಯಲು ಇದನ್ನ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಕಡೆಯಿಂದ ಪೋಸ್ಟ್ ಹಾಕಲಾಗಿತ್ತು. 'ಸ್ಕ್ಯಾಮ್ ರಾಮಯ್ಯ' ಹೆಸರಿನಲ್ಲಿ ಪುಸ್ತಕವನ್ನೂ ಬಿಡುಗಡೆ ಮಾಡಿ ಆಕ್ರೋಶ ಹೊರ ಹಾಕಿತ್ತು. ಅಲ್ಲದೆ, ಸೋನಿಯಾ ಗಾಂಧಿ ಫೋಟೋ ಸಹಿತ 'ಪೇ ಟು ಮೇಡಂ' ಪೋಸ್ಟರನ್ನೂ ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಧಿವೇಶನದಲ್ಲಿ 40% ಕಮಿಷನ್ ಎಂದು ಬರೆದಿದ್ದ ಪ್ಲೆಕಾರ್ಡ್ ಹಿಡಿದು ಧರಣಿ ನಡೆಸಿತ್ತು. ಈ ನಡುವೆ ರೈತ ಸಂಘದ ಸದಸ್ಯರು, 'PAY FARMER' ಎಂಬ ಅಭಿಯಾನ ಶುರು ಮಾಡಿದ್ದು ಹೊಸ ವಿದ್ಯಮಾನ ಆಗಿತ್ತು. ಇದರ ನಡುವೆ ಜೆಡಿಎಸ್, ಇವೆರಡೂ ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್ ಕೊಡಲು ಹೊಸ ಪೋಸ್ಟರ್ ಗೆ ಸಿದ್ಧತೆ ನಡೆಸಿದೆ.
Congress, BJP poster campaign, JDS set to give counter to both the parties
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm