ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm