ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.
ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm