ಬ್ರೇಕಿಂಗ್ ನ್ಯೂಸ್
28-09-22 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಕಡೆಗಳಲ್ಲಿರುವ ಆಸ್ತಿಗಳಿಗೆ ಬುಧವಾರ ದಾಳಿ ನಡೆಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
ಕನಕಪುರ ತಹಶೀಲ್ದಾರ್ ವಿಶ್ವನಾಥ್ ಹಾಗೂ ಪೋಲೀಸರ ಜತೆಗೆ ತೆರಳಿದ್ದ ಕೇಂದ್ರ ತನಿಖಾ ದಳದ ಅಧಿಕಾರಿಗಳು, ಪರಿಶೀಲನೆ ವೇಳೆ ಕೆಲವು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಅವರ ಸಂಬಂಧಿಕರ ಆಸ್ತಿ ವಿವರಗಳ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ. ತನಿಖಾ ತಂಡದ ಅಧಿಕಾರಿಗಳು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸಿಬಿಐ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಬಿಐ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ಜೊತೆಗೆ ಕರೆದುಕೊಂಡು ಬಂದು, ನಮ್ಮ ಊರಿನ ಆಸ್ತಿ ಪರಿಶೀಲನೆ ಮಾಡುತ್ತಿದ್ದಾರೆ. ಅವರು ಕೇಳಿದ ದಾಖಲೆ ನೀಡಿದ್ದೇನೆ. ನಮ್ಮ ತೋಟದ ಮನೆ, ಊರಿನ ಮನೆಗೆ ಬಂದು ಎಲ್ಲಾ ಆಸ್ತಿಗಳನ್ನು ನೋಡಿದ್ದಾರೆ ಅಂತ ಸಿಬ್ಬಂದಿ ತಿಳಿಸಿದ್ದಾರೆ. ಇಷ್ಟು ಮಾತ್ರ ನಂಗೆ ಗೊತ್ತು ಎಂದರು.
ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, "ಏನು ಮಾಡೋಕೆ ಆಗುತ್ತೆ.. ಇದು ಹಣೆಬರಹ. ಇದು ಟಾರ್ಗೆಟ್ ಅಂತ ನಾನು ಹೇಳುವುದಿಲ್ಲ. ಅವರು ನನ್ನ ಪ್ರೀತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
The CBI sleuths on Wednesday visited Karnataka Congress president D K Shivakumar's properties at his hometown in Ramanagara district and verified the documents related to them, his office said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm