ಬ್ರೇಕಿಂಗ್ ನ್ಯೂಸ್
28-09-22 11:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮರು ಪರೀಕ್ಷೆ ನಡೆಸುವುದನ್ನು ರದ್ದು ಮಾಡುವಂತೆ ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದ್ರ ಅವರಿದ್ದ ವಿಭಾಗೀಯ ನ್ಯಾಯಪೀಠ, ಮರುಪರೀಕ್ಷೆ ನಿರ್ಧಾರಕ್ಕೆ ತಡೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಪಿ.ಎಸ್. ರಾಜಗೋಪಾಲ್, ಎ.ಎಸ್. ಪೊನ್ನಣ್ಣ, ಡಿ.ಆರ್.ರವಿಶಂಕರ್ ಅವರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದರು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್.ಸುಬ್ರಹ್ಮಣ್ಯ ಅವರು, ಪ್ರಕರಣ ವ್ಯಾಪಕವಾಗಿ ಹರಡಿದ್ದು, ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ.
ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
Psi scam in Karnataka, high court brings stay order on re examination of PSI exams in state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm