ಬ್ರೇಕಿಂಗ್ ನ್ಯೂಸ್
28-09-22 11:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28 : ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮರು ಪರೀಕ್ಷೆ ನಡೆಸುವುದನ್ನು ರದ್ದು ಮಾಡುವಂತೆ ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದ್ರ ಅವರಿದ್ದ ವಿಭಾಗೀಯ ನ್ಯಾಯಪೀಠ, ಮರುಪರೀಕ್ಷೆ ನಿರ್ಧಾರಕ್ಕೆ ತಡೆ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಪಿ.ಎಸ್. ರಾಜಗೋಪಾಲ್, ಎ.ಎಸ್. ಪೊನ್ನಣ್ಣ, ಡಿ.ಆರ್.ರವಿಶಂಕರ್ ಅವರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದರು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್.ಸುಬ್ರಹ್ಮಣ್ಯ ಅವರು, ಪ್ರಕರಣ ವ್ಯಾಪಕವಾಗಿ ಹರಡಿದ್ದು, ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ.
ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
Psi scam in Karnataka, high court brings stay order on re examination of PSI exams in state.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm