ಬ್ರೇಕಿಂಗ್ ನ್ಯೂಸ್
29-09-22 10:51 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೀತಾರೆ. ಹೀಗೆಂದು ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಪಿಎಫ್ಐ ಬ್ಯಾನ್ ಜೊತೆಗೆ ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಸಿದ್ಧರಾಮಯ್ಯ ಮತ್ತು ಅವರ ಪಕ್ಷಕ್ಕೆ ಪಿಎಫ್ಐ ಬ್ಯಾನ್ ಮಾಡಿದ್ದರಿಂದ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದನ್ನ ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಅದಕ್ಕೆ ಅದನ್ನ ಆರ್ಎಸ್ಎಸ್ ಜೊತೆ ಲಿಂಕ್ ಮಾಡುತ್ತಿದ್ದಾರೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.
ಆರ್ಎಸ್ಎಸ್ ಬ್ಯಾನ್ ಮಾಡಬೇಕೆಂದ್ರೆ ನಾವೇ ಆರ್ಎಸ್ಎಸ್, ದೇಶದ ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ನಿಂದ ಬಂದವರು ಇದು ಸತ್ಯ. ನಮ್ಮ ನಿಲುವನ್ನ ಕಾಂಗ್ರೆಸ್ಗೆ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ, ಯಾಕಂದ್ರೆ ಅದಕ್ಕೆ ಸಾಕ್ಷಿಗಳಿವೆ. ಇದರಿಂದ ಅವರಿಗೆ ಸಪೋರ್ಟ್ ಮಾಡುವ ರೀತಿಯಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪಿಎಫ್ಐ ಮೇಲೆ ಪ್ರೀತಿ ಇದೆ, ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಈ ದೇಶದ ಯಾವುದೇ ಜನಾಂಗವನ್ನ ಮತಗಳ ಬ್ಯಾಂಕ್ ಎಂದು ಬಿಜೆಪಿ ನೋಡಿಲ್ಲ. ನಾವು ಎಂದೂ ಈ ದೇಶದಲ್ಲಿರುವ ಎಲ್ಲಾ ಅಲ್ಪಸಂಖ್ಯಾತರು ಕೆಟ್ಟವರೆಂದು ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ.
ಸಿದ್ದರಾಮಯ್ಯನವರು ಮತಗಳ ಬ್ಯಾಂಕ್ ಪಾಲಿಟಿಕ್ಸ್ ಭಯದಿಂದಾಗಿ ಆರ್ಎಸ್ಎಸ್ ವಿರೋಧ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೆಯುತ್ತಾರೆ ಅಷ್ಟೇ ಎಂದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
If Siddaramaiah opposes ban of PFI he will be kicked by people in state maks says Minister of Parliamentary Affairs, Coal and Mines of India, Pralhad Joshi. Congress is already burning unable to tolerate the ban of PFI in India he added.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm